ಹೊಸದಿಗಂತ ಅಂಕೋಲಾ :
ಮಳೆಯಿಂದ ರಸ್ತೆ, ಮನೆ ಬಿದ್ದಿರುವುದು ಹಾಗೂ ಬೆಳೆ ಹಾನಿಯಾಗಿರುವುದಕ್ಕೆ ಪರಿಹಾರ ಕಾರ್ಯಗಳನ್ನು ತುರ್ತಾಗಿ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ದುರಂತ ಸ್ಥಳ ಪರಿಶೀಲಿಸಲು ನಾಳೆ ಭಾನುವಾರ ತೆರಳುತ್ತಿರುವುದಾಗಿ ತಿಳಿಸಿದರು.
ವಿಜಯೇಂದ್ರ ಭೇಟಿ:
ಭಾನುವಾರ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮಧ್ಯಾಹ್ನ 3 ಗಂಟೆಗೆ ಶಿರೂರು, ಉಳುವರೆ ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಲಿದ್ದಾರೆ.