ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಭದ್ರತೆಯಲ್ಲಿ ಲೋಪ: 8 ಮಂದಿ ಪೊಲೀಸರ ಅಮಾನತು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಭದ್ರತೆಯಲ್ಲಿ ಲೋಪ ಕಂಡ ಹಿನ್ನೆಲೆ ರ ಓರ್ವ ಇನ್ಸ್ ಪೆಕ್ಟರ್ ಹಾಗೂ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ 8 ಮಂದಿ ಪೊಲೀಸರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಶುಕ್ರವಾರ ಬೆಳಗ್ಗೆ 11-28 ಸುಮಾರಿನಲ್ಲಿ ಜೆ.ಪಿ. ನಡ್ಡಾ ಅವರನ್ನು ಬರಮಾಡಿಕೊಳ್ಳಲು ಸಿಎಂ ಗೋರಕ್ ಪುರ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಕುಶ್ಮಾಹಿ ರಸ್ತೆಯಿಂದ ಅನೇಕ ವಾಹನಗಳು ಸಿಎಂ ಎದುರಿಗೆ ಬಂದಿದ್ದವು. ಈ ಘಟನೆ ಸಂಬಂಧ ತನಿಖೆಗೆ ಆದೇಶಿಸಿದ್ದ ತಾಡಾ, ಲೋಪ ಕಂಡುಬಂದ ಹಿನ್ನೆಲೆಯಲ್ಲಿ 8 ಪೊಲೀಸರನ್ನು ಸೇವೆಯಿಂದ ಅಮಾನತು ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!