ಕಾಡು ಪ್ರಾಣಿ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಮಗು ಸಾವು: ಗ್ರಾಮಸ್ಥರಿಂದ ಪ್ರತಿಭಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕಾಡುಪ್ರಾಣಿ ದಾಳಿಯಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದ 3 ವರ್ಷದ ಮಗು ಸಾವನ್ನಪ್ಪಿದೆ. ಇದೀಗ ಮಗುವಿನ ಶವವನ್ನು ಅರಣ್ಯ ಇಲಾಖೆ ಕಚೇರಿ ಮುಂದೆ ಇಟ್ಟು ಗ್ರಾಮಸ್ಥರು ಪ್ರತಿಭಟನೆಗಿಳಿದಿದ್ದಾರೆ.

ಕಳೆದ ವಾರ ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಯರಿಯೂರು ಗ್ರಾಮದಲ್ಲಿ ಪ್ರಾಣಿ ದಾಳಿಯಿಂದ ರುಕ್ಮಿಣಿ ಎಂಬ ಮಗು ಗಾಯಗೊಂಡಿತ್ತು. ನಿನ್ನೆ (ಆ.23) ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಮೃತಪಟ್ಟಿದೆ.

ಮಗುವಿನ ಸಾವಿನಿಂದ ಆಕ್ರೋಶಗೊಂಡಿರುವ ಕುಟುಂಬ ಅರಣ್ಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಯಳಂದೂರು ವಲಯ ಅರಣ್ಯಾಧಿಕಾರಿ ಕಚೇರಿ ಎದುರು ಮಗುವಿನ ಶವ ಇಟ್ಟು ಪ್ರತಿಭಟನೆ ನಡೆಸಿದ್ದಾರೆ.

ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಮಗು ಬಲಿಯಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!