ಹೊಸದಿಗಂತ ವರದಿ ಕೊಪ್ಪಳ:
ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ಲೊಂದರಲ್ಲಿ ಗುರುವಾರ ರಾತ್ರಿ ವಿದ್ಯಾರ್ಥಿಗಳು ಊಟ ಮಾಡಿದ ನಂತರ ಹೊಟ್ಟೆ ನೋವು, ವಾಂತಿ ಮಾಡಿಕೊಂಡು ಅಸ್ವಸ್ಥಗೊಂಡಿದ್ದಾರೆ. ಸುಮಾರು 20 ಮಕ್ಕಳು ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹಾಸ್ಟೆಲ್ನಲ್ಲಿ ಅಸ್ವಚ್ಛತೆಯಿಂದಲೇ ಮಕ್ಕಳು ಅಸ್ವಸ್ತರಾಗಿದ್ದಾರೆ ಎಂಬುದು ತಿಳಿದು ಬಂದಿದೆ. ವಿಷಯ ತಿಳಿದ ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಯೋಗಕ್ಷೇಮ ವಿಚಾರಿಸಿದರು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಚಿದಾನಂದಗೆ ತರಾಟೆ ತೆಗೆದುಕೊಂಡಿದ್ದಾರೆ.