ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಸಿನಿಮಾ ‘ವಾಲ್ತೇರು ವೀರಯ್ಯ’ ಪ್ರೇಕ್ಷಕರ ಮುಂದೆ ಬಂದಿದೆ. ಮಧ್ಯರಾತ್ರಿಯಿಂದಲೇ ಮೆಗಾ ಅಭಿಮಾನಿಗಳು ಥಿಯೇಟರ್ಗಳತ್ತ ಮುಗಿ ಬೀಳುತ್ತಿದ್ದಾರೆ. ಗುಂಟೂರು ಜಿಲ್ಲೆಯ ಪೊನ್ನೂರಿನ ಶ್ರೀ ಲಕ್ಷ್ಮಿ ಥಿಯೇಟರ್ ನಲ್ಲಿ ಥಿಯೇಟರ್ ಮ್ಯಾನೇಜ್ ಮೆಂಟ್ ಬೆನಿಫಿಟ್ ಶೋ ಆಯೋಜಿಸಿತ್ತು.
ಆದರೆ, ತಾಂತ್ರಿಕ ದೋಷದಿಂದ ಪ್ರದರ್ಶನ ತಡವಾಯಿತು. ಕಾದು ಕಾದು ಸುಸ್ತಾದ ಅಭಿಮಾನಿಗಳು ಥಿಯೇಟರ್ ಗ್ಲಾಸ್ಗಳನ್ನು ಒಡೆದು ಹಾಕಿದ್ದಾರೆ. ಇದರಿಂದ ಚಿತ್ರಮಂದಿರದಲ್ಲಿ ಕೆಲಕಾಲ ಗೊಂದಲ, ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ಸುದ್ದಿ ತಿಳಿದ ಪೊಲೀಸರು ಥಿಯೇಟರ್ಗೆ ಆಗಮಿಸಿ ಅಭಿಮಾನಿಗಳನ್ನು ಅಲ್ಲಿಂದ ಕಳುಹಿಸಿದ್ದಾರೆ. ಸದ್ಯ ಇದಕ್ಕೆ ಸಂಬಂಧಿಸಿದ ಫೋಟೋಗಳು ವೈರಲ್ ಆಗಿವೆ.