August 6, 2026
Thursday, August 6, 2026
spot_img

ಚಿತ್ರದುರ್ಗ: ಆ.11 ರಿಂದ 15 ರವರೆಗೆ ‘ಹರ್-ಘರ್ ತಿರಂಗ’ ಅಭಿಯಾನ; ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಪೂರ್ವಭಾವಿ ಸಭೆ

ಹೊಸದಿಗಂತ ವರದಿ ಚಿತ್ರದುರ್ಗ:

ಭಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿಯವರ ಅಧ್ಯಕ್ಷತೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಜಿಲ್ಲಾ ಕಾರ್ಯಾಲಯದಲ್ಲಿ ಹರ್-ಘರ್ ತಿರಂಗ ಅಭಿಯಾನದ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿತ್ತು.

ಈ ವಿಶೇಷ ಸಭೆಯಲ್ಲಿ ಇದೇ ತಿಂಗಳು ಆಗಸ್ಟ್ 11 ರಿಂದ ಆಗಸ್ಟ್ 15 ರವರೆಗೆ ಹರ್-ಘರ್ ತಿರಂಗ ಅಭಿಯಾನದ ಬಗ್ಗೆ ಕೈಗೊಳ್ಳಬೇಕಾದ ವಿವಿಧ ಕಾರ್ಯಕ್ರಮಗಳ ಬಗ್ಗೆ ವಿಸ್ಕೃತವಾಗಿ ಚರ್ಚೆ ಮಾಡಲಾಯಿತು.

ಇದನ್ನೂ ಓದಿ:

ಈ ಪೂರ್ವಭಾವಿ ಸಭೆಯಲ್ಲಿ ದಾವಣಗೆರೆ ವಿಭಾಗ ಸಹ ಪ್ರಭಾರಿ ಎ.ಮುರುಳಿ, ಜಿಲ್ಲಾ ಉಪಾಧ್ಯಕ್ಷ ಡಾ.ಸಿದ್ದಾರ್ಥ ಗುಂಡಾರ್ಪಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಾಧುರಿ ಗಿರೀಶ್, ವೆಂಕಟೇಶ್ ಯಾದವ್, ಡಾ.ಪಿ.ಎಂ.ಮಂಜುನಾಥ ಸೇರಿದಂತೆ ಹರ್-ಘರ್ ತಿರಂಗ ಅಭಿಯಾನದ ಸಂಚಾಲಕರು, ರಾಜ್ಯ, ಜಿಲ್ಲಾ ಮತ್ತು ಮಂಡಲ ಮಟ್ಟದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !