ಚಿತ್ರದುರ್ಗ: ಭಾರೀ ಮಳೆಗೆ ಶಾಲೆ ಜಲಾವೃತ; ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಗೆ ಗ್ರಾಮಸ್ಥರ ಆಕ್ರೋಶ

ಹೊಸದಿಗಂತ ವರದಿ, ಚಿತ್ರದುರ್ಗ
ಚಿತ್ರದುರ್ಗದಲ್ಲಿ ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ ಪಿಳ್ಳೆಕೇರನಹಳ್ಳಿಯ ಸರ್ಕಾರಿ ಶಾಲೆ ಆವರಣ ಸಂಪೂರ್ಣ ಜಲಾವೃತಗೊಡಿದೆ.
ಚಿತ್ರದುರ್ಗ ತಾಲೂಕಿನ ಪಿಳ್ಳೇಕೇರನಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣಕ್ಕೆ ಪಕ್ಕದಲ್ಲೇ ಇರುವ ಮಲ್ಲಾಪುರ ಕೆರೆಯ ನೀರು ಹರಿದು ಬಂದಿದ್ಜದರಿಂದ ಜಲಾವೃತಗೊಂಡಿದೆ. ಮಳೆ ಗಾಳಿಯ ಅರ್ಭಟಕ್ಕೆ ಶಾಲಾವರಣದಲ್ಲಿದ್ದ  2 ಮರಗಳು ಸಹ ನೆಲಕ್ಕುರುಳಿರುಳಿವೆ. ಪ್ರತಿ ವರ್ಷ ಮಳೆಗಾಲದಲ್ಲಿ ಶಾಲೆ ಜಲಾವೃತಗೊಳ್ಳುತ್ತದ್ದು ಮಕ್ಕಳ ಶಿಕ್ಷಣಕ್ಕೆ ಸಮಸ್ಯೆ ಎದುರಾಗುತ್ತಿದೆ. ಈ ಬಗ್ಗೆ ಗಮನಕ್ಕೆ ತಂದರೂ ಶಿಕ್ಷಣ ಇಲಾಖೆ, ಜಿಲ್ಲಾಡಳಿತ ನಿರ್ಲಕ್ಷ ಧೋರಣೆ ತೋರುತ್ತಿವೆ ಎಂದು ಸ್ಥಳೀಯರು ಕಿಡಿಕಾರಿದ್ದಾರೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!