ಹೊಸದಿಗಂತ ಡಿಜಿಟಲ್ ಡೆಸ್ಕ್:
ಕ್ರೇಜಿ ಕ್ವೀನ್ ರಕ್ಷಿತಾ ಸಹೋದರ ರಾಣಾ ಮದುವೆ ಅದ್ಧೂರಿಯಾಗಿ ಜರುಗಿದೆ. ಇಂದು ಆರತಕ್ಷತೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದೆ. ಈ ಸಂಭ್ರಮದಲ್ಲಿ ದರ್ಶನ್ ಭಾಗಿಯಾಗಿ ಹೊಸ ಜೋಡಿಗೆ ಶುಭಕೋರಿದ್ದಾರೆ.
ಕೊಲೆ ಪ್ರಕರಣದಲ್ಲಿ ಬೇಲ್ ಸಿಕ್ಕ ಬಳಿಕ ಮೊದಲ ಬಾರಿಗೆ ಶುಭಕಾರ್ಯದಲ್ಲಿ ದರ್ಶನ್ ಹಾಜರಿ ಹಾಕಿದ್ದಾರೆ. ಪತ್ನಿ ವಿಜಯಲಕ್ಷ್ಮಿ, ಸಹೋದರ ದಿನಕರ್ ತೂಗುದೀಪ ಜೊತೆ ದರ್ಶನ್ ಆಗಮಿಸಿದ್ದಾರೆ. ಹೊಸ ಬಾಳಿಗೆ ಕಾಲಿಟ್ಟಿರುವ ರಾಣಾಗೆ ದರ್ಶನ್ ಶುಭಕೋರಿದ್ದಾರೆ.
ಗೆಳತಿ ರಕ್ಷಿತಾಗೆ ಕೊಟ್ಟ ಮಾತಿನಂತೆ ಕಾರ್ಯಕ್ರಮಕ್ಕೆ ಕುಟುಂಬ ಸಮೇತ ದರ್ಶನ್ ಭಾಗಿಯಾಗಿದ್ದಾರೆ.