ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್ ವುಡ್ ನಟ ದರ್ಶನ್ ಈಗ ಚಿತ್ರೀಕರಣದಿಂದ ಬಿಡುವು ಮಾಡಿಕೊಂಡು ಮಂಗಳೂರಿನ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿ ದರುಶನ ಪಡೆದಿದ್ದಾರೆ. ಕೊರಗಜ್ಜ ದೈವ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದರ್ಶನ್ ಜೊತೆ ನಟ ಚಿಕ್ಕಣ್ಣ ಹಾಗೂ ನಟ ಯಶಸ್ ಸೂರ್ಯ ಕೂಡ ಸಾಥ್ ನೀಡಿದ್ದಾರೆ.
ಪೂಜೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ದರ್ಶನ್, ಕುತ್ತಾರು ಕೊರಗಜ್ಜನ ಸನ್ನಿಧಿಗೆ ಭೇಟಿ ನೀಡಿದ್ದು ಇದೇ ಮೊದಲು. ಮಂಗಳೂರಿಗೆ ಹಲವು ಬಾರಿ ಬಂದಿದ್ದೇನೆ. ಆದರೆ, ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿಲ್ಲ. ಇಂದು ಇಲ್ಲಿಗೆ ಬರಲು ಬೇರೆ ಯಾವುದೇ ನಿರ್ದಿಷ್ಟ ಕಾರಣ ಇರಲಿಲ್ಲ ಎಂದು ದರ್ಶನ್ ತಿಳಿಸಿದ್ದಾರೆ.