ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಜಯ್ ರಾವ್ ಅಭಿನಯಿಸಿರುವ ‘ಯುದ್ಧಕಾಂಡ’ ಸಿನಿಮಾ ಇಂದು ಬಿಡುಗಡೆಗೊಂಡಿದೆ. ತಮ್ಮ ಸಿನಿಮಾದ ಕುರಿತು ಮಾತನಾಡಿರುವ ನಟ ಅಜಯ್ ಇವತ್ತಿನ ತಂತ್ರಜ್ಞಾನ ಬಳಸಿಕೊಂಡು ಕ್ರೈಮ್ ಆಗದಿರುವಂತಹ ಸಮಾಜ ನಿರ್ಮಾಣವಾಗಬೇಕು ಎಂಬ ಆಶಯವನ್ನು ಈ ಸಿನಿಮಾ ಮೂಲಕ ಹೊರ ಹಾಕಿದ್ದಾರೆ.
ಈ ಚಿತ್ರದ ಪ್ರತಿಯೊಂದು ದೃಶ್ಯ ಮಾಡುವಾಗಲೂ, ನಾನು ಸೋಲಬಾರದು ಅಂತ ಹೆದರಿಕೊಂಡು ಸಿನಿಮಾ ಮಾಡಿದ್ದೇನೆ. ಈ ಚಿತ್ರಕ್ಕೆ ತುಂಬಾ ಸಾಲ ಮಾಡಿದ್ದೇನೆ. ಅಡ ಇಟ್ಟಿದ್ದೇನೆ. ಕನ್ನಡ ಸಿನಿಮಾ ಬೆಳೆಯಲಿ ಎಂಬ ಉದ್ದೇಶದ ಜೊತೆಗೆ ನಾನೂ ಕಲಾವಿದನಾಗಿ ಬೆಳೆಯಬೇಕು ಎಂಬ ಆಶಯದಿಂದ ಸಿನಿಮಾ ಮಾಡಿದ್ದೇನೆ ಎಂದು ಹೇಳಿದ್ದಾರೆ.
ಚಿತ್ರಕ್ಕೆ 90 ದಿನಗಳ ಕಾಲ ಚಿತ್ರೀಕರಣ ಮಾಡಿದ್ದೇವೆ. ನಮ್ಮ ಕೆಲಸಕ್ಕೆ ನ್ಯಾಯ ಸಲ್ಲಿಸಿದ್ದೇವೆ. ಸರಸ್ವತಿ ಗೆದ್ದರೆ ಲಕ್ಷ್ಮೀ ತಾನಾಗಿಯೇ ಬರುತ್ತಾಳೆ. ಹಾಗಾಗಿ ಆತಂಕವಿಲ್ಲ. ಒಂದೊಳ್ಳೆಯ ಚಿತ್ರ ಮಾಡಿದ ಖುಷಿ ಇದೆ ಎಂದು ಹೇಳಿದ್ದಾರೆ.
ಈ ಸಿನಿಮಾವನ್ನು ಪವನ್ ಭಟ್ ನಿರ್ದೇಶಿಸಿದ್ದು, ಅರ್ಚನಾ ಜೋಯಿಸ್ ನಾಯಕಿ ಪಾತ್ರದಲ್ಲಿ ನಟಿಸಿದ್ದಾರೆ. ಪ್ರಕಾಶ್ ಬೆಳವಾಡಿ, ಟಿ.ಎಸ್.ನಾಗಾಭರಣ ತಾರಾಬಳಗದಲ್ಲಿದ್ದಾರೆ.