ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲುಗಿನ ಖ್ಯಾತ ನಟ ಜೂನಿಯರ್ ಎನ್ ಟಿಆರ್ ಅಭಿನಯದ ‘ದೇವರ’ ಚಿತ್ರದ ಶೂಟಿಂಗ್ ವೈಜಾಗ್ ನ ಕಾಡಿನಲ್ಲಿ ನಡೆದಿದೆ. ಈ ಸಮಯದಲ್ಲಿ, ಹೆಜ್ಜೇನು ಮೇಲೆ ದಾಳಿ ನಡೆದಿದ್ದು, ಇದರ ಪರಿಣಾಮವಾಗಿ ಚಿತ್ರತಂಡದ 20 ಕ್ಕೂ ಹೆಚ್ಚು ಸದಸ್ಯರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಅಕ್ಟೋಬರ್ 10 ರಂದು “ದೇವರ” ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗುವ ಕಾರಣ, ಚಿತ್ರತಂಡ ಚಿತ್ರೀಕರಣದಲ್ಲಿ ನಿರತವಾಗಿದೆ. ಈ ಸಮಯದಲ್ಲಿ, ಹೆಜ್ಜೇನು ದಾಳಿ ಸಂಭವಿಸಿದೆ.
ಈ ನಡುವೆ ದೇವರ ಸಿನಿಮಾ ಟೀಮ್ ನಿಂದ ಮತ್ತೊಂದು ಅಪ್ ಡೇಟ್ ಸಿಕ್ಕಿದ್ದು, ಈ ಸಿನಿಮಾವನ್ನು ಕನ್ನಡಕ್ಕೂ ಡಬ್ ಮಾಡಿ ರಿಲೀಸ್ ಮಾಡಲಾಗುತ್ತಿದೆ. ತಮ್ಮ ಪಾತ್ರಕ್ಕೆ ಕನ್ನಡದಲ್ಲಿ ಜ್ಯೂನಿಯರ್ ಅವರೇ ಡಬ್ ಮಾಡುವ ಸಾಧ್ಯತೆ ಇದೆ ಎನ್ನುವ ಮಾಹಿತಿಯೂ ಹರಿದಾಡುತ್ತಿದೆ.