ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಜನವರಿ 22 ರಂದು ಅಯೋಧ್ಯೆಯಲ್ಲಿ ನೆರವೇರಲಿದ್ದು, ಇದು ಬಹಳ ವಿಶೇಷವಾದ ದಿನವಾಗಿದೆ. ಈ ಮೂಲಕ ದೇಶಾದ್ಯಂತ ಜನರು ಅನೇಕ ಒಳ್ಳೆಯ ಕಾರ್ಯಗಳನ್ನು ಹಮ್ಮಿಕೊಂಡಿದ್ದಾರೆ. ಅದೇ ರೀತಿ ಸ್ಯಾಂಡಲ್ ವುಡ್ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮನೆಯಲ್ಲಿ ಪುಟ್ಟ ರಾಮನ ಸಂಭ್ರಮಾಚರಣೆ ನಡೆಯಲಿದೆ.
ಪುಟ್ಟ ರಾಮನ ಸಂಭ್ರಮ ಮುಗಿಲು ಮುಟ್ಟಿದ್ದು, ಮುದ್ದಾದ ಇಬ್ಬರು ಮಕ್ಕಳಿಗೆ ಧ್ರುವ ಸರ್ಜಾ ಹಾಗೂ ಪ್ರೇರಣಾ ನಾಮಕರಣ ಕಾರ್ಯಕ್ರಮ ನಡೆಸಿದ್ದಾರೆ ಎನ್ನಲಾಗಿದೆ. ನಾಳೆ ತಮ್ಮ ಇಬ್ಬರು ಮಕ್ಕಳಿಗೆ ಹೆಸರಿಡಲು ಧ್ರುವ ಸರ್ಜಾ ಬಯಸಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯ ದಿನದಂದೇ ತಮ್ಮ ಇಬ್ಬರು ಮಕ್ಕಳಿಗೆ ನಾಮಕರಣ ಮಾಡಲು ನಿರ್ಧರಿಸಿದ್ದಾರೆ.
ಧ್ರುವ ಸರ್ಜಾ ಹಾಗೂ ಪ್ರೇರಣಾ ಅವರಿಗೆ ಒಂದು ಗಂಡು, ಒಂದು ಹೆಣ್ಣು ಮಗುವಿದ್ದು, ತಮ್ಮ ಮಕ್ಕಳಿಗೆ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳ ಹೆಸರನ್ನು ಇಡುವ ಆಲೋಚನೆ ಇದೆ ಎನ್ನಲಾಗಿದೆ. ಧ್ರುವ ಸರ್ಜಾ ಅವರ ಬೃಂದಾವನ ಫಾರ್ಮ್ ಹೌಸ್ನಲ್ಲಿ ಕುಟುಂಬಸ್ಥರು ಹಾಗೂ ಆತ್ಮೀಯರ ಸಮ್ಮುಖದಲ್ಲಿ ಧ್ರುವ ಮಕ್ಕಳ ನಾಮಕರಣ ಶಾಸ್ತ್ರ ನಡೆಯಲಿದೆ.