ಪೌರತ್ವ ತಿದ್ದುಪಡಿ ಕಾಯಿದೆ ಅರ್ಜಿ ವಿಚಾರಣೆಗೆ ನಿಗದಿಯಾಗಿದೆ ದಿನ!

ಹೊಸದಿಗಂತ ಡಿಜಿಟಲ್ ಡೆಸ್ಕ್:

2019ರ ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 12ರಂದು ನಡೆಸಲಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಪೀಠವು ಸೋಮವಾರ 200ಕ್ಕೂ ಹೆಚ್ಚು ಅರ್ಜಿಗಳನ್ನು ಪರಿಗಣಿಸುತ್ತದೆ. ಜನವರಿ 2020ರಲ್ಲಿ ಆಗಿನ ಸಿಜೆಐ ಎಸ್.ಎ ಬೋಬ್ಡೆ ನೇತೃತ್ವದ ಪೀಠವು ಅರ್ಜಿಗಳಿಗೆ ನೋಟಿಸು ನೀಡಿತ್ತು.

ಅಲ್ಲದೇ ತಿದ್ದುಪಡಿಯನ್ನು ಜಾರಿಗೊಳಿಸುವ ಮೊದಲು ಅಸ್ತಿತ್ವದಲ್ಲಿದ್ದ ಯಾವುದೇ ಹಕ್ಕನ್ನು ಸಿಎಎ ಅಡ್ಡಿಪಡಿಸುವುದಿಲ್ಲ ಎಂದು ಸರ್ಕಾರವು ತಮ್ಮ ಅಫಿಡವಿಟ್‌ನಲ್ಲಿ ಹೇಳಿದೆ. ಸಿಎಎ ಯಾವುದೇ ಭಾರತೀಯ ನಾಗರಿಕ ಕಾನೂನು, ಪ್ರಜಾಸತ್ತಾತ್ಮಕ ಅಥವಾ ಜಾತ್ಯತೀತ ಹಕ್ಕುಗಳ ಮೇಲೆ ಪರಿಣಾಮ ಬೀರಲು ಬಯಸುವುದಿಲ್ಲ ಎಂದು ಪೀಠಕ್ಕೆ ತಿಳಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!