ರಾಮ ಮಂದಿರದ ಮುಂಭಾಗ ಎರಡು ಗುಂಪುಗಳ ನಡುವೆ ಘರ್ಷಣೆ, ವಾಹನಗಳಿಗೆ ಬೆಂಕಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿರುವ ರಾಮ ಮಂದಿರದ ಮುಂಭಾಗ ಎರಡು ಗುಂಪುಗಳ ನಡುವೆ ಭಾರೀ ಘರ್ಷಣೆ ನಡೆದಿದೆ.

ಈ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದಿದ್ದು, ಕಂಡ ವಾಹನಗಳಿಗೆಲ್ಲಾ ಬೆಂಕಿ ಹಚ್ಚಲಾಗಿದೆ. ಇದರಲ್ಲಿ ಪೊಲೀಸ್ ವಾಹನಗಳೂ ಸೇರಿವೆ.

ರಾಮ ಮಂದಿರದ ಮೇಲೆ ಕೆಲವು ಕಿಡಿಗೇಡಿಗಳು ದಾಳಿ ನಡೆಸಿದ್ದಾರೆ ಎನ್ನುವ ಸುಳ್ಳು ಸುದ್ದಿ ಹಬ್ಬುತ್ತಿದ್ದಂತೆಯೇ ಕೋಮುವಾದಿ ಘರ್ಷಣೆಗಳು ಆರಂಭವಾಗಿದ್ದು, ಇದು ಜಗಳಕ್ಕೆ ಕಾರಣವಾಗಿದೆ. ಒಬ್ಬರ ಮೇಲೊಬ್ಬರು ಕಲ್ಲು ತೂರಾಟ ಮಾಡಿದ್ದಾರೆ. ದೇವಸ್ಥಾನಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ಎಐಎಂಐಎಂನ ರಾಷ್ಟ್ರೀಯ ಕಾರ್ಪೋರೇಟರ್ ಮೊಹಮ್ಮದ್ ನಾಸಿರುದ್ದೀನ್ ಹೇಳಿದ್ದಾರೆ.

ಜನರನ್ನು ಚದುರಿಸಲು ಪೊಲೀಸರು ಬಲಪ್ರಯೋಗ ಮಾಡಿದ್ದು, ಇದೀಗ ಪರಿಸ್ಥಿತಿ ಶಾಂತವಾಗಿದೆ.

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!