ಎರಡು ಗುಂಪಿನ ನಡುವೆ ಮಾರಾಮಾರಿ:ಮೂವರ ಬಂಧನ

ಹೊಸದಿಗಂತ ವರದಿ ಹುಬ್ಬಳ್ಳಿ:

ಹುಡುಗಿ ವಿಷಯಕ್ಕೆ‌ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಪಾಲಿಕೆ‌ ಸದಸ್ಯ ಚೇತನ ಹಿರೇಕೆರೂರ ಮೂವರ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆ ಅವನನ್ನು ಸೇರಿ‌ ಮೂವರನ್ನು ಗೋಕುಲ ರಸ್ತೆಯ ಪೊಲೀಸರು ಬಂಧಿಸಿದ್ದಾರೆ.

ರಾಹುಲ್ ಎಂಬಾತ ಹಲ್ಲೆಗೊಳಗಾದ ವ್ಯಕ್ತಿ. ಭಾನುವಾರ ಗೋಕುಲ ರಸ್ತೆ ಪ್ರತಿಷ್ಠಿತ ಹೋಟೆಲವೊಂದರಲ್ಲಿ ಹುಡಗಿ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಈ ಸಂದರ್ಭದಲ್ಲಿ ಪಾಲಿಕೆ‌ ಸದಸ್ಯ ಚೇತನ ಅವರ ಗುಂಪು ರಾಹುಲ್ ಸೇರಿ‌ ಇಬ್ಬರ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ ನಡಿಸಿದ್ದಾರೆ. ರಾಹುಲ್ ಅವರ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಷಯ ತಿಳಿದ ಗೋಕುಲ ರಸ್ತೆಯ ಪೊಲೀಸರು ಪರಿಶೀಲಿಸಿ ತಪಿತಸ್ಥರನ್ನು ಬಂಧಿಸಿದ್ದಾರೆ. ಗೋಕುಲ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!