January20, 2026
Tuesday, January 20, 2026
spot_img

ಧರ್ಮಸ್ಥಳದಲ್ಲಿ ಘರ್ಷಣೆ: ಯಾರೇ ತಪ್ಪು ಮಾಡಿದ್ದರೂ ಕಾನೂನು ಪ್ರಕಾರ ಕ್ರಮ ಎಂದ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಧರ್ಮಸ್ಥಳದ ಬಳಿ ಎರಡು ಗುಂಪುಗಳ ನಡುವಿನ ಘರ್ಷಣೆಗೆ ಕಾರಣರಾದವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾರೇ ತಪ್ಪು ಮಾಡಿದ್ದರೂ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ಧರ್ಮಸ್ಥಳದ ಬಳಿ ಮೂವರು ಯೂಟ್ಯೂಬ್ ಚಾನೆಲ್‌ಗಳನ್ನು ಪ್ರತಿನಿಧಿಸುವ ನಾಲ್ವರು ವ್ಯಕ್ತಿಗಳ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಧರ್ಮಸ್ಥಳ ಗ್ರಾಮದ ಪಾಂಗಾಳ ಗ್ರಾಮದ ರಸ್ತೆ ಬಳಿ ಯೂಟ್ಯೂಬರ್‌ಗಳ ಮೇಲೆ ನಡೆದ ಹಲ್ಲೆ ನಂತರ, ಎರಡು ಗುಂಪುಗಳು ಪರಸ್ಪರ ನಿಂದನೆ ಮತ್ತು ಕಲ್ಲು ತೂರಾಟ ನಡೆಸಲು ಪ್ರಾರಂಭಿಸಿದವು. ಪೊಲೀಸರು ಗುಂಪನ್ನು ಚದುರಿಸಲು ಪ್ರಯತ್ನಿಸಿದರು. ಆದರೆ, ಪರಿಸ್ಥಿತಿ ಉಲ್ಬಣಗೊಳ್ಳುವ ಪರಿಸ್ಥಿತಿ ಉಂಟಾದಾಗ, ಗುಂಪನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದರು.

Must Read