ಹೊಸದಿಗಂತ ಡಿಜಿಟಲ್ ಡೆಸ್ಕ್:
ಧಾರ್ಮಿಕ ಧ್ವಜವನ್ನು ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಿ ಜೆಮ್ಶೆಡ್ಪುರದ ಶಾಸ್ತ್ರಿನಗರದಲ್ಲಿ ಎರಡು ಗುಂಪುಗಳ ನಡುವೆ ಇಟ್ಟಿಗೆ-ಬ್ಯಾಟ್ಗಳ ಮೂಲಕ ಹೊಡೆದಾಡಿದ್ದು, ಸಿಕ್ಕ ಸಿಕ್ಕ ವಸ್ತುಗಳಿಗೆ ಬೆಂಕಿ ಹಚ್ಚಲಾಯಿತು. ಭಾನುವಾರ ಸಂಜೆ ಆ ಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಸಿಆರ್ಪಿಸಿಯ ಸೆಕ್ಷನ್ 144ರ ಅಡಿಯಲ್ಲಿ ಅಧಿಕಾರಿಗಳು ನಿಷೇಧಾಜ್ಞೆ ಹೇರಿದ್ದಾರೆ.
ಕಾದಾಡುತ್ತಿದ್ದ ಗುಂಪುಗಳಿಂದ ಎರಡು ಅಂಗಡಿಗಳು ಮತ್ತು ಆಟೋ ರಿಕ್ಷಾವನ್ನು ಸುಟ್ಟುಹಾಕಲಾಯಿತು. ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದರು. ಕಾನೂನು ಸುವ್ಯವಸ್ಥೆ ಕಾಪಾಡಲು ಜಾರ್ಖಂಡ್ನ ಕದ್ಮಾ ಪೊಲೀಸ್ ಠಾಣೆ ವ್ಯಾಪ್ತಿಯ ಶಾಸ್ತ್ರಿನಗರದಲ್ಲಿ ಸಾಕಷ್ಟು ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.
#WATCH | Security forces conduct flag march in Jamshedpur's Kadma police station area following an incident of stone pelting and arson, in Jharkhand
Section 144 CrPc is enforced in the area and mobile internet is temporarily banned. pic.twitter.com/NhPnWtkQhR
— ANI (@ANI) April 10, 2023
ಕೆಲವು ಸಮಾಜ ವಿರೋಧಿ ಶಕ್ತಿಗಳು ಶಾಂತಿ ಕದಡಲು ಪ್ರಯತ್ನಿಸುತ್ತಿದ್ದಾರೆ ಮತ್ತು ಅವರ ಸಂಚು ವಿಫಲಗೊಳಿಸಲು ನಾಗರಿಕರಿಂದ ಸಹಕಾರವನ್ನು ಕೋರಲಾಗಿದೆ ಎಂದು ಪೂರ್ವ ಸಿಂಗ್ಭೂಮ್ ಜಿಲ್ಲಾ ಉಪ ಆಯುಕ್ತ ವಿಜಯ ಜಾಧವ್ ಹೇಳಿದರು. “ನಾವು ಪರಿಸ್ಥಿತಿಯ ಮೇಲೆ ಕಟ್ಟುನಿಟ್ಟಾದ ಜಾಗರೂಕತೆಯನ್ನು ಇರಿಸಿದ್ದೇವೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಸಾಕಷ್ಟು ಪೊಲೀಸ್ ಪಡೆ, ಕ್ವಿಕ್ ರೆಸ್ಪಾನ್ಸ್ ಟೀಮ್, ಮ್ಯಾಜಿಸ್ಟ್ರೇಟ್, ರ್ಯಾಪಿಡ್ ಆಕ್ಷನ್ ಫೋರ್ಸ್, ಗಲಭೆ ವಿರೋಧಿ ಸಂಪನ್ಮೂಲಗಳನ್ನು ನಿಯೋಜಿಸಿದ್ದೇವೆ” ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ರಾಮನವಮಿ ಧ್ವಜಕ್ಕೆ ಮಾಂಸದ ತುಂಡನ್ನು ಟ್ಯಾಗ್ ಮಾಡಿರುವುದನ್ನು ಸ್ಥಳೀಯ ಸಂಘಟನೆಯ ಸದಸ್ಯರು ಕಂಡು ಶನಿವಾರ ರಾತ್ರಿಯಿಂದ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಲವಾರು ಸಂಘಟನೆಗಳು ಪ್ರತಿಭಟನೆ ನಡೆಸಿ 24 ಗಂಟೆಯೊಳಗೆ ಆರೋಪಿಗಳನ್ನು ಪೊಲೀಸರು ಬಂಧಿಸಬೇಕು ಎಂದು ಒತ್ತಾಯಿಸಿದರು. ಕೋಮು ಸೌಹಾರ್ದತೆ ಕದಡುವ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಸಾಮಾಜಿಕ ಮಾಧ್ಯಮದಲ್ಲಿ ಕೆರಳಿಸುವ ಪೋಸ್ಟ್ಗಳನ್ನು ಹಂಚಿಕೊಳ್ಳಬೇಡಿ ಎಂದು ಜನರನ್ನು ಒತ್ತಾಯಿಸಿದರು.