ಹೊಸದಿಗಂತ ಡಿಜಿಟಲ್ ಡೆಸ್ಕ್:
ಹುಡುಗಿಗಾಗಿ ಆರಂಭವಾದ ವಾಗ್ವಾದ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.
12ನೇ ತರಗತಿಯಲ್ಲಿ ವ್ಯಾಸಂಗ ಮಾಡ್ತಿದ್ದ ಮೂವರು ಸ್ನೇಹಿತರು ಸೇರಿಕೊಂಡು ಯುವರಾಜ್ (20) ಎಂಬಾತನ ಕೊಲೆ ಮಾಡಿದ್ದಾರೆ. ಇದೀಗ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
ಸಹೋದರಿಯಿಂದ ರಾಖಿ ಕಟ್ಟಿಸಿಕೊಂಡಿದ್ದ ಯುವರಾಜ್ ಮಾರುಕಟ್ಟೆಗೆ ಬಂದು ಸಿಹಿ ಖರೀದಿ ಮಾಡುತ್ತಿದ್ದನು. ಈ ಸಂದರ್ಭದಲ್ಲಿ ಆತನ ಮೇಲೆ ಮೂವರು ಸ್ನೇಹಿತರು ಚಾಕುವಿನಿಂದ ಹಲ್ಲೆ ನಡೆಸಿ, ಕೊಲೆ ಮಾಡಿದ್ದಾರೆ.
ಯುವರಾಜ್ ಕುಟುಂಬದೊಂದಿಗೆ ಕಸ್ತೂರಬಾ ನಗರದಲ್ಲಿ ವಾಸವಾಗಿದ್ದ. 12ನೇ ತರಗತಿಯಲ್ಲಿ ವ್ಯಾಸಂಗ ಮಾಡ್ತಿದ್ದ ಈತನ ಕುಟುಂಬದಲ್ಲಿ ತಾಯಿ, ಸಹೋದರ, ಸಹೋದರಿ ಮತ್ತು ಇತರೆ ಸಂಬಂಧಿಕರಿದ್ದಾರೆ.
ಯುವರಾಜ್ನ ಸ್ನೇಹಿತನೋರ್ವ ಕಸ್ತೂರ ಬಾ ನಗರದಲ್ಲಿ ವಾಸವಾಗಿದ್ದ ಹುಡುಗಿ ಜೊತೆ ಅಕ್ರಮ ಸಂಬಂಧ ಹೊಂದಿದ್ದನಂತೆ. ಇದೇ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ಶುರುವಾಗಿದ್ದು, ಅದು ತಾರಕ್ಕೇರಿದಾಗ ಕೊಲೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.