ಹುಡುಗಿಗಾಗಿ ಸ್ನೇಹಿತನನ್ನೇ ಕೊಲೆ ಮಾಡಿದ 12ನೇ ತರಗತಿ ವಿದ್ಯಾರ್ಥಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹುಡುಗಿಗಾಗಿ ಆರಂಭವಾದ ವಾಗ್ವಾದ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.
12ನೇ ತರಗತಿಯಲ್ಲಿ ವ್ಯಾಸಂಗ ಮಾಡ್ತಿದ್ದ ಮೂವರು ಸ್ನೇಹಿತರು ಸೇರಿಕೊಂಡು ಯುವರಾಜ್​ (20) ಎಂಬಾತನ ಕೊಲೆ ಮಾಡಿದ್ದಾರೆ. ಇದೀಗ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ಸಹೋದರಿಯಿಂದ ರಾಖಿ ಕಟ್ಟಿಸಿಕೊಂಡಿದ್ದ ಯುವರಾಜ್​ ಮಾರುಕಟ್ಟೆಗೆ ಬಂದು ಸಿಹಿ ಖರೀದಿ ಮಾಡುತ್ತಿದ್ದನು. ಈ ಸಂದರ್ಭದಲ್ಲಿ ಆತನ ಮೇಲೆ ಮೂವರು ಸ್ನೇಹಿತರು ಚಾಕುವಿನಿಂದ ಹಲ್ಲೆ ನಡೆಸಿ, ಕೊಲೆ ಮಾಡಿದ್ದಾರೆ.

ಯುವರಾಜ್​ ಕುಟುಂಬದೊಂದಿಗೆ ಕಸ್ತೂರಬಾ ನಗರದಲ್ಲಿ ವಾಸವಾಗಿದ್ದ. 12ನೇ ತರಗತಿಯಲ್ಲಿ ವ್ಯಾಸಂಗ ಮಾಡ್ತಿದ್ದ ಈತನ ಕುಟುಂಬದಲ್ಲಿ ತಾಯಿ, ಸಹೋದರ, ಸಹೋದರಿ ಮತ್ತು ಇತರೆ ಸಂಬಂಧಿಕರಿದ್ದಾರೆ.

ಯುವರಾಜ್​ನ ಸ್ನೇಹಿತನೋರ್ವ ಕಸ್ತೂರ ಬಾ ನಗರದಲ್ಲಿ ವಾಸವಾಗಿದ್ದ ಹುಡುಗಿ ಜೊತೆ ಅಕ್ರಮ ಸಂಬಂಧ ಹೊಂದಿದ್ದನಂತೆ. ಇದೇ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ಶುರುವಾಗಿದ್ದು, ಅದು ತಾರಕ್ಕೇರಿದಾಗ ಕೊಲೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!