ನೀತಿ ಸಂಹಿತೆ ಜಾರಿ ಹಿನ್ನಲೆ ರಾಜ್ಯಾದ್ಯಂತ ಕಟೌಟ್‌ಗಳ ತೆರವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕ ಘೋಷಣೆ ಮತ್ತು
ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆಯೇ ರಾಜ್ಯಾದ್ಯಂತ ಕಟೌಟ್‌ಗಳನ್ನು ತೆರವುಗೊಳಿಸಲಾಗುತ್ತಿದೆ.

ರಾಜ್ಯದೆಲ್ಲೆಡೆ ಸಚಿವರು, ಶಾಸಕರ ಬ್ಯಾನರ್‌ಗಳನ್ನು ತೆರವುಗೊಳಿಸಲಾಗುತ್ತಿದೆ. ಕಟ್ಟಡ, ಸರ್ಕಾರಿ ಕಚೇರಿ, ಕ್ರೀಡಾಂಗಣಗಳಲ್ಲಿ ಹಾಕಲಾದ ಫ್ಲೆಕ್ಸ್, ಕಟೌಟ್, ಬ್ಯಾನರ್‌ಗಳನ್ನು ತೆರವುಗೊಳಿಸುವ ಕಾರ್ಯಚರಣೆಯನ್ನು ಆರಂಭಿಸಲಾಗಿದೆ.

ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವ ಎಂಟಿಬಿ ನಾಗರಾಜ್, ಎಂಎಲ್‌ಸಿ ರುದ್ರಗೌಡ, ಸಂಸದ ರಾಘವೇಂದ್ರ ಮತ್ತಿತರು ಸರ್ಕಾರಿ ವಾಹನ ಬಿಟ್ಟು ತಮ್ಮ ಖಾಸಗಿ ವಾಹನಗಳಲ್ಲಿ ತೆರಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!