ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಮಾಚಲ ಪ್ರದೇಶದಲ್ಲಿ ಮೇಘಸ್ಪೋಟಕ್ಕೆ ಸೇತುವೆಯೊಂದು ಕೊಚ್ಚಿಹೋಗಿದೆ. ಭಾರೀ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತವಾಗಿವೆ. ಭಾನುವಾರ ರಾತ್ರಿ ಸುರಿದ ಮಳೆಗೆ ಮನಾಲಿಯ ಸೆರಿ ನಾಲಾ ಪ್ರದೇಶದಲ್ಲಿ ಭಾರಿ ಪ್ರವಾಹ ಉಂಟಾಗಿ, ಇಲ್ಲಿನ ಸೋಲಾಂಗ್-ಮನಾಲಿಯನ್ನು ಸಂಪರ್ಕಿಸುವ ಬಿಯಾಸ್ ನದಿಗೆ ನಿರ್ಮಿಸಲಾದ ಸೇತುವೆ ಕೊಚ್ಚಿಹೋಗಿದೆ. ಅದೊಂದು ಮರದ ಸೇತುವೆಯಾಗಿದ್ದು, ಪ್ರವಾಹದ ಪ್ರಭಾವ ತೀವ್ರವಾಗಿದ್ದರೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಹೈ ಅಲರ್ಟ್ ಘೋಷಿಸಿದ್ದಾರೆ. ಜನರು ಮನೆಯಿಂದ ಹೊರಗೆ ಬರದಂತೆ ಅದರಲ್ಲೂ ಬಿಯಾಸ್ ನದಿಯ ಕಡೆಗೆ ಬರದಂತೆ ಸೂಚಿಸಲಾಗಿದೆ. ಸುತ್ತಮುತ್ತಲಿನ ಜನರಿಗೆ ಎಚ್ಚರದಿಂದ ಇರುವಂತೆ ಸೂಚನೆ ನೀಡಲಾಗಿದೆ. ಸದ್ಯ ಇಲ್ಲಿನ ಬಿಯಾಸ್ ನದಿ ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿದ್ದು, ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.
#WATCH | After heavy rainfall through the night, the water levels of Beas river flowing next to Manali in Himachal Pradesh rise. Visuals from Vashisht Chowk of Manali pic.twitter.com/1GbjG8C45U
— ANI (@ANI) July 25, 2022