ಸಿಎಂ ಅರವಿಂದ್ ಕೇಜ್ರಿವಾಲ್​​​​ಗೆ ಜಾಮೀನು ಮಂಜೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ರೂಸ್ ಅವನ್ಯೂ ನ್ಯಾಯಾಲಯ ಇಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಜಾಮೀನು ಮಂಜೂರು ಮಾಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಕೇಜ್ರಿವಾಲ್‌ಗೆ 11 ಬಾರಿ ಸಮನ್ಸ್ ನೀಡಿತ್ತು, ಆದರೆ ಯಾವುದಕ್ಕೂ ಉತ್ತರ ಬಂದಿರಲಿಲ್ಲ. ಅದಕ್ಕಾಗಿ ಇಡಿ ಅವೆನ್ಯೂ ನ್ಯಾಯಾಲಯದ ಮೆಟ್ಟಿಲೇರಿತ್ತು. ರೂಸ್ ಕೋರ್ಟ್ ಕೇಜ್ರಿವಾಲ್ ಕೋರ್ಟಿಗೆ ಹಾಜರಾಗಬೇಕು ಎಂದು ಆದೇಶ ನೀಡಿದ ಹಿನ್ನೆಲೆ ಕೇಜ್ರಿವಾಲ್ ಕೋರ್ಟ್‌ಗೆ ಹಾಜರಾಗಿದ್ದರು. ವಿಚಾರಣೆ ಬಳಿಕ ಇದೀಗ ಜಾಮೀನು ಮಂಜೂರು ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!