ಹೊಸದಿಗಂತ ಡಿಜಿಟಲ್ ಡೆಸ್ಕ್:
ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಸಂಜೆ ವೇಳೆ ಭೇಟಿ ನೀಡಿದರು.
ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ದರುಶನ ಪಡೆದು, ಪ್ರಾರ್ಥನೆ ಸಲ್ಲಿಸಿದರು. ಬಳಿಕ ಸಂಪುಟ ನರಸಿಂಹ ಸ್ವಾಮಿ ದೇವರ ದರುಶನ ಪಡೆದರು. ನಂತರ ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.
ಕರಾವಳಿಯ ದೇವಸ್ಥಾನಕ್ಕೆ ಆಗಾಗ ಭೇಟಿ ನೀಡುತ್ತಿರುತ್ತೇನೆ. ಕಟೀಲು, ಧರ್ಮಸ್ಥಳ, ಕೊಲ್ಲೂರಿಗೆ ಭೇಟಿ ನೀಡುತ್ತಿರುತ್ತೇನೆ. ಇಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದೇನೆ. ಇದೀಗ ಚುನಾವಣೆ ಬಂದಿದೆ ಆ ಹಿನ್ನಲೆಯಲ್ಲೂ ಭೇಟಿ ನೀಡಿ, ರಾಜ್ಯದ ಜನರ ಸುಭೀಕ್ಷೆಗೆ ಪ್ರಾರ್ಥಿಸಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು.
ಮಳೆ ಸಿಂಚನ:
ಸಿಎಂ ಬೊಮ್ಮಾಯಿ ಕ್ಷೇತ್ರಕ್ಕೆ ಆಗಮಿಸುವ ಕೆಲ ಕ್ಷಣದ ಮೊದಲು ಮಳೆ ಆರಂಭಗೊಂಡಿದ್ದು, ಮುಖ್ಯಮಂತ್ರಿಗಳು ದೇವರ ದರುಶನ ಪಡೆದು ತೆರಳುವ ವೇಳೆಗೆ ಮಳೆ ವಿರಾಮ ನೀಡಿತ್ತು.