ಅಕ್ಟೋಬರ್ 7ರಂದು ಸರ್ವಪಕ್ಷಗಳ ಸಭೆ ಕರೆದ ಸಿಎಂ ಬೊಮ್ಮಾಯಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ವಿವಿಧ ವಿಷಯಗಳ ಕುರಿತಂತೆ ಚರ್ಚಿಸುವ ಸಲುವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅಕ್ಟೋಬರ್ 7ರಂದು ಮಹತ್ವದ ಸರ್ವಪಕ್ಷಗಳ ಸಭೆಯನ್ನು ಕರೆದಿದ್ದಾರೆ.
ಸರ್ವಪಕ್ಷಗಳ ಸಭೆಯನ್ನು ಕರೆಯುವುದಾಗಿ ಸಿಎಂ ಬೊಮ್ಮಾಯಿಯವರು ಅಧಿವೇಶನದ ಸಂದರ್ಭದಲ್ಲಿ ವಿಪಕ್ಷಗಳ ನಾಯಕರಿಗೆ ಭರವಸೆಯನ್ನು ನೀಡಿದ್ದರು.ಇದೀಗ ಭರವಸೆಯಂತೆ ಅಕ್ಟೋಬರ್ 7ರಂದು ಸರ್ವಪಕ್ಷಗಳ ಸಭೆಯನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಕರೆದಿದ್ದಾರೆ. ಈ ಸಭೆಯಲ್ಲಿ ವಿಧಾನಸಭೆಯ ವಿಪಕ್ಷ ನಾಯಕರು, ಕಾಂಗ್ರೆಸ್, ಜೆಡಿಎಸ್ ನಾಯಕರು, ಪರಿಷತ್ ವಿಪಕ್ಷ ನಾಯಕರು ಭಾಗವಹಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!