ಉಷಾ ಮಂಗೇಶ್ಕರ್‌ಗೆ ಕರೆ ಮಾಡಿ ಸಾಂತ್ವನ ಹೇಳಿದ ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗಾಯಕಿ ಲತಾ ಮಂಗೇಶ್ಕರ್ ಅವರ ಕುಟುಂಬದವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾಂತ್ವನ ಹೇಳಿದ್ದಾರೆ. ಲತಾ ಅವರ ಸಹೋದರಿ ಉಷಾ ಮಂಗೇಶ್ಕರ್ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿ, ಲತಾ ಮಂಗೇಶ್ಕರ್ ಅವರು ಭಾರತದ ಕೋಗಿಲೆ. ಹಲವು ತಲೆಮಾರುಗಳ ಜನರ ಉಸಿರಿನ ಜೊತೆ ಲತಾ ಅವರು ಜೀವಂತವಾಗಿ ಇರುತ್ತಾರೆ. ದೇಶದ ಎಲ್ಲ ಜನತೆ ಮನಸ್ಸಲ್ಲೂ ಲತಾ ಅವರಿಗೆ ವಿಶೇಷ ಸ್ಥಾನ ಇದೆ ಎಂದಿದ್ದಾರೆ.

ಮಹಾನ್ ಗಾಯಕಿಯನ್ನು ನಾವು ಕಳೆದುಕೊಂಡಿದ್ದೇವೆ. ಲತಾ ಅವರ ನಿಧನದ ಗೌರವಾರ್ಥ ಕರ್ನಾಟಕದಲ್ಲಿ ಶೋಕಾಚರಣೆಗೆ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!