ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಬೊಮ್ಮಾಯಿ ಅವರನ್ನು ನಾಯಿಮರಿಗೆ ಹೋಲಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಈ ಬಗ್ಗೆ ಸಿಎಂ ಬೊಮ್ಮಾಯಿ ಮಾತನಾಡಿದ್ದಾರೆ.
ಯಾರು ಏನು ಮಾತನಾಡುತ್ತಾರೋ ಅವರ ವ್ಯಕ್ತಿತ್ವ ಅದಾಗಿರುತ್ತದೆ. ನಾಯಿ ನಿಯತ್ತಿನ ಪ್ರಾಣಿ ಎನ್ನುವುದನ್ನು ಸಿದ್ದರಾಮಯ್ಯ ಮರೆತಿದ್ದಾರೆ. ಇದಕ್ಕೆ ಉತ್ತರ ನೀಡೋದಿಲ್ಲ, ಜನರೇ ಎಲ್ಲದ್ದಕ್ಕೂ ಉತ್ತರ ನೀಡಲಿದ್ದಾರೆ. ನಿಯತ್ತಾಗಿ ಸರ್ಕಾರ ನಡೆಸುತ್ತಿದ್ದೇನೆ, ಸುಳ್ಳು ಹೇಳುವ ಅವಶ್ಯಕತೆ ನನಗಿಲ್ಲ ಎಂದಿದ್ದಾರೆ.
ರಾಜ್ಯಕ್ಕೆ ಸೌಭಾಗ್ಯ ಕೊಡುತ್ತೇನೆ ಎಂದು ಹೇಳಿಕೊಂಡು ದೌರ್ಭಾಗ್ಯ ನೀಡಿಲ್ಲ. ಮಾತಿನಲ್ಲಿ ಏನನ್ನೂ ಸಾಬೀತು ಮಾಡಬೇಕಿಲ್ಲ. ನನ್ನ ಕೆಲಸದ ಮೂಲಕ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.