ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಸಿಎಂ ಬೊಮ್ಮಾಯಿ, ರಾಜ್ಯಪಾಲರಿಂದ ಸ್ವಾಗತ, ಇಂದಿನ ಕಾರ್ಯಕ್ರಮಗಳೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆಂಪೇಗೌಡರ ಪ್ರತಿಮೆ ಅನಾವರಣ, ಹೊಸ ಟರ್ಮಿನಲ್ ಉದ್ಘಾಟನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಪ್ರಧಾನಿ ಮೋದಿ ಇಂದು ಬೆಂಗಳೂರಿಗೆ ಆಗಮಿಸಿದ್ದು, ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಪಾಲರಾದ ತಾವರ್‌ಚಂದ್ ಗೆಹ್ಲೋಟ್ ಸ್ವಾಗತ ಕೋರಿದ್ದಾರೆ.

ಶಾಸಕರ ಭವನದ ಆವರಣದಲ್ಲಿ ಇರುವ ಕನಕದಾಸ, ವಾಲ್ಮೀಕಿ ಪ್ರತಿಮೆಗಳಿಗೆ ಪ್ರಧಾನಿ ಮೋದಿ ಮಾಲಾರ್ಪಣೆ ಮಾಡಲಿದ್ದಾರೆ. ಮೆಜೆಸ್ಟಿಕ್‌ಗೆ ರಸ್ತೆ ಮಾರ್ಗದ ಮೂಲಕ ತೆರಳಲಿದ್ದು, ವಂದೇ ಭಾರತ್ ರೈಲಿಗೆ ಚಾಲನೆ ನೀಡಲಿದ್ದಾರೆ. ಕಾಶಿಯಾತ್ರೆ ವಿಶೇಷ ರೈಲಿಗೂ ಚಾಲನೆ ನೀಡಿ ನಂತರ ಹೆಬ್ಬಾಳ ಹೆಲಿಪ್ಯಾಡ್‌ಗೆ ತಲುಪಲಿದ್ದಾರೆ, ಹೆಲಿಕಾಪ್ಟರ್ ಮೂಲಕ ಕೆಂಪೇಗೌಡ ಅಂತಾರಾಷ್ಟ್ರಿಯ ವಿಮಾನ ನಿಲ್ದಾಣ ತಲುಪಲಿದ್ದಾರೆ. ಹೊಸತಾಗಿ ನಿರ್ಮಿಸಿರುವ ಟರ್ಮಿನಲ್ 2 ಉದ್ಘಾಟನೆ ಮಾಡಲಿದ್ದಾರೆ. ತದನಂತರ ನಾಡಪ್ರಭು ಕೆಂಪೇಗೌಡರ ಬೃಹತ್ ಕಂಚಿತ ಪುತ್ಥಳಿ ಅನಾವರಣಗೊಳಿಸಲಿದ್ದಾರೆ.

ಮಧ್ಯಾಹ್ನ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ನಂತರ ತಮಿಳುನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!