ಹೊಸದಿಗಂತ ವರದಿ ಶಿವಮೊಗ್ಗ:
ಎಲೆ ಚುಕ್ಕಿ ರೋಗ ಸಮಸ್ಯೆಯಿಂದ ತೀವ್ರ ನಷ್ಟ ಎದುರಿಸುತ್ತಿರುವ ರೈತ ಸಮುದಾಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 10 ಕೋಟಿ ರೂಪಾಯಿ ಘೋಷಣೆ ಮಾಡಿದ್ದಾರೆ.
ಬೈಂದೂರಿನಲ್ಲಿ ವಿವಿಧ ಕಾಮಗಾರಿ, ಉದ್ಘಾಟನೆ ಕಾರ್ಯಕ್ರಮಗಳಿಗೆ ಆಗಮಿಸಿದ್ದು, ಸಂಸದ ಬಿ.ವೈ. ರಾಘವೇಂದ್ರ ಅವರ ಮನವಿಗೆ ಸ್ಪಂದಿಸಿ ಪರಿಹಾರ ಘೋಷಿಸಿದ್ದಾರೆ.
ಈ ಹಿಂದೆ ಮಾಜಿ ಸಿಎಂ ಬಿಎಸ್ವೈ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಂಸದರಾದ ಬಿ.ವೈ. ರಾಘವೇಂದ್ರ ಹಾಗೂ ಶಾಸಕರಾದ ಹಾಲಪ್ಪ ಕೇಂದ್ರ ಕೃಷಿ, ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪನೆ ಮತ್ತು ಅಡಿಕೆ ಬೆಳೆಗೆ ಎಲೆಚುಕ್ಕಿ ರೋಗದಿಂದ ಸಂತ್ರಸ್ತ ರೈತರಿಗೆ ಪರಿಹಾರ ನೀಡುವ ಕುರಿತು ಮನವಿ ಸಲ್ಲಿಸಿದ್ದರು.
ಎಲೆ ಚುಕ್ಕೆ ರೋಗ ದ ಕುರಿತು ಅಡಕೆ ಬೆಲೆಗಾರರನ್ನು ರಕ್ಷಣೆ ಮಾಡುವಂತೆ ಇಂದು ಬೈಂದುರಿನ ಮುಳ್ಳಿಕಟ್ಟೆಯಲ್ಲಿ ಸಿಎಂ ಬೊಮ್ಮಾಯಿ, ಹಾಗೂ ಮಾಜಿ ಸಿಎಂ ಬಿಎಸ್ವೈರನ್ನು ರೈತರ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿದರು.