ಚೀನಾ ನುಗ್ಗಿದಂತೆ ಕರ್ನಾಟಕಕ್ಕೆ ನುಗ್ಗುತ್ತೇವೆ ಎಂದ ಸಂಜಯ್ ರಾವತ್ ಗೆ ತಿರುಗೇಟು ಕೊಟ್ಟ ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಗಡಿ ವಿವಾದ ವಿಚಾರವಾಗಿ ಶಿವಸೇನೆ ನಾಯಕ ಸಂಜಯ್ ರಾವತ್ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಭಾರತಕ್ಕೆ ಚೀನಾ ನುಗ್ಗಿದಂತೆ ಕರ್ನಾಟಕಕ್ಕೆ ನುಗ್ಗುತ್ತೇವೆ ಎಂದು ರಾವತ್ ಹೇಳಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, ಚೀನಾ ರೀತಿಯಲ್ಲಿ ಆಕ್ರಮಣ ಮಾಡುತ್ತೇವೆ ಎಂದು ಸಂಜಯ್ ರಾವತ್ ಹೇಳಿದ್ದಾರೆ.ಈ ಕಡೆಯೂ ಭಾರತ ದೇಶವಿದೆ ಅಂತ ಅವರಿಗೆ ಗೊತ್ತಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ನಮ್ಮವರು ಹೇಗೆ ಚೀನಾ ಹಿಮ್ಮೆಟ್ಟಿಸಿದರು. ಹಾಗೆ ನಾವೆಲ್ಲ ಕನ್ನಡಿಗರು. ಆಕ್ರಮಣ ಮಾಡಲು ನಾವೆಲ್ಲ ಒಂದೇ ದೇಶದಲ್ಲಿ ಇದ್ದೇವೆ. ಆದರೂ ಅವರು ಆ ಭಾಷೆಯನ್ನು ಬಳಸಿರುವುದಕ್ಕೆ ಉತ್ತರ ಕೊಡಬೇಕಿದೆ. ಈ ವಿಚಾರವನ್ನು ಕೇಂದ್ರ ಗೃಹ ಸಚಿವರ ಗಮನಕ್ಕೆ ತರುತ್ತೇನೆ ಎಂದು ತಿಳಿಸಿದ್ದಾರೆ.
ಗಡಿ ವಿಚಾರದಲ್ಲಿ ರಾಜಕಾರಣ ಮಾಡಲು ಹೊರಟಿದ್ದಾರೆ. ಅದು ಆಗುವುದಿಲ್ಲ. ಈ ಹಿಂದೆ ಎನ್.ಸಿ.ಪಿ. ನಾಯಕರು ರಾಜಕೀಯ ಮಾಡಲು ಹೋಗಿ ವಿಫಲರಾಗಿದ್ದಾರೆ. ಈಗಲೂ ಸಹ ವಿಫಲರಾಗುತ್ತಾರೆ ಎಂದು ಸಿಎಂ ಹೇಳಿದ್ದಾರೆ.

.ಗಡಿ ಕುರಿತು ಮಹಾರಾಷ್ಟ್ರದವರೇ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ಅವರ ಕೇಸ್ ವೀಕ್ ಆಗಿದೆ ಅನ್ನುವುದು ಗೊತ್ತಾಗಿದೆ. ಈ ಸಂದರ್ಭ ಉಪಯೋಗಿಸಿಕೊಂಡು ಲಾಭ ಪಡೆಯಲು ಹೋಗುತ್ತಿದ್ದಾರೆ. ಯಾವುದೇ ರೀತಿ ಗೊಂದಲ, ಘಟನೆಯಾಗದಂತೆ ನೋಡಿಕೊಂಡಿದ್ದೇವೆ. ಶಾಂತಿ ಭಂಗಕ್ಕೆ ಯಾವುದೇ ಅವಕಾಶ ಕೊಟ್ಟಿಲ್ಲ. ನಾಳೆ ವಿಧಾನಸಭೆಯಲ್ಲಿ ಇದಕ್ಕೆ ಸುಧೀರ್ಘವಾಗಿ ಉತ್ತರ ಕೊಡುತ್ತೇನೆ ಎಂದು ಸಿಎಂ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!