ಪ್ರಧಾನಿ ಮೋದಿಗೆ ಕೆಂಪೇಗೌಡರ ಪೇಟ, ಪ್ರತಿಮೆ ನೀಡಿ ಸಿಎಂ ಬೊಮ್ಮಾಯಿ ಸನ್ಮಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ 108ಅಡಿ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು. ಬಳಿಕ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾದ ಪ್ರಧಾನಿ ಕೆಂಪೇಗೌಡರು, ವಾಲ್ಮೀಕಿ, ಕನಕದಾಸ, ಒನಕೆ ಓಬವ್ವ ಫೋಟೋಗಳಿಗೆ ಪುಷ್ಪಾರ್ಚನೆ ಮಾಡಿದರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿಯವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸನ್ಮಾನಿಸಿದರು.

ಪ್ರಧಾನಿಗೆ ಕೆಂಪೇಗೌಡರ ಪೇಟ ತೊಡಿಸಿ ಮಾಲೆ ಹಾಕಿ, ಕಾಮಧೇನು, ಕೆಂಪೇಗೌಡರ ಪ್ರತಿಮೆಯನ್ನು ಉಡುಗೊರೆಯಾಗಿ ನೀಡಿದ್ರು. ಈ ವೇಳೆ ವೇದಿಕೆಯಲ್ಲಿ ರಾಜ್ಯಪಾಲರಾದ ಗೆಹ್ಲೋಟ್‌, ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಸಚಿವ ಎಸ್‌.ಟಿ.ಸೋಮಶೇಖರ್ ಗೃಹ ಸಚಿವ ಆರಗ ಜ್ಞಾನೇಂದ್ರ, ಮಾಜಿ ಸಿಎಂ ಯಡಿಯೂರಪ್ಪ, ಸಂಸದ ತೇಜಸ್ವಿ ಸೂರ್ಯ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!