ಹೊಸದಿಗಂತ ವರದಿ,ಕಲಬುರಗಿ:
ನೆರೆಯ ರಾಜ್ಯದ ಗಾಂಜಾ ದಂಧೆಕೋರರಿಂದ ಹಲ್ಲೆಗೊಳಗಾಗಿದ್ದ ಕಲಬುರಗಿ ಗ್ರಾಮೀಣ ಪೋಲಿಸ್ ಠಾಣೆ ಸಿಪಿಐ ಶ್ರೀಮಂತ ಇಲ್ಲಾಳ ಆರೋಗ್ಯದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಚಾರಣೆ ಮಾಡಿದರು.
ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಶ್ರೀಮಂತ ಇಲ್ಲಾಳ ಅವರನ್ನು ದಾಖಲು ಮಾಡಿದ್ದರು. ಸೋಮವಾರ ಮಣಿಪಾಲ ಆಸ್ಪತ್ರೆಗೆ ತೆರಳಿದ ಮುಖ್ಯಮಂತ್ರಿ ವೈದ್ಯರಿಂದ ಅವರ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಬೃಹತ್ ಮತ್ತು ಮದ್ಯಮ ಕೈಗಾರಿಕಾ ಸಚಿವ ಕಲಬುರಗಿ ಉಸ್ತುವಾರಿ ಮುರುಗೇಶ್ ನಿರಾಣಿ ಜೊತೆಗಿದ್ದರು.