ರೂಪಾ ಮೌದ್ಗಿಲ್-ರೋಹಿಣಿ ಸಿಂಧೂರಿಗೆ ನೋಟೀಸ್ ಜಾರಿ ಮಾಡುವಂತೆ ಸಿಎಂ ಬೊಮ್ಮಾಯಿ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸರ್ಕಾರದ ಇಬ್ಬರು ಉನ್ನತ ಮಟ್ಟದ ಮಹಿಳಾ ಅಧಿಕಾರಿಗಳ ಜಗಳ ಬೀದಿಗೆ ಬಂದು ನಿಂತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಬ್ಬರು ಅಧಿಕಾರಿಗಳಿಗೂ ನೋಟಿಸ್ ನೀಡುವಂತೆ ಸೂಚನೆ ನೀಡಿದ್ದಾರೆ.

ಈ ರೀತಿ ಇಬ್ಬರು ಅಧಿಕಾರಿಗಳು ಜಗಳವಾಡುತ್ತಿರುವುದು ನಾಚಿಕೆಗೇಡಿನ ಸಂಗತಿ, ಉನ್ನತ ಅಧಿಕಾರಿಗಳ ಈ ವರ್ತನೆ ಸಹಿಸಲು ಆಗುವುದಿಲ್ಲ. ಇದರಿಂದ ಸರ್ಕಾರಕ್ಕೂ ಕೆಟ್ಟ ಹೆಸರು. ಹಾಗಾಗಿ ಇಬ್ಬರಿಗೂ ನೋಟೀಸ್ ನೀಡುವಂತೆ ಸಿಎಂ ಬೊಮ್ಮಾಯಿ ಹೇಳಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ,

ವೈಯಕ್ತಿಕ ಜಗಳ ಇದ್ದರೆ ವೈಯಕ್ತಿಕವಾಗಿ ಮಾಡಿಕೊಳ್ಳಲಿ, ಸಮಸ್ಯೆಯಿದ್ದರೆ ಸರ್ಕಾರದ ಗಮನಕ್ಕೆ ತರಬೇಕು ಅದನ್ನು ಬಿಟ್ಟು ಈ ರೀತಿ ಕಿತ್ತಾಡುವುದು ಸರಿಯಲ್ಲಿ ಎಂದು ಗೃಹ ಸಚಿವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!