ಹೊಸದಿಗಂತ ವರದಿ ಮೈಸೂರು:
ನಗರದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ರುವ ಸುತ್ತೂರು ಮಠಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿದರು. ಪತ್ನಿ ಯೊಂದಿಗೆ ಆಗಮಿಸಿದ ಅವರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿ ಅವರಿಂದ ಆಶೀರ್ವಾದ ಪಡೆದರು. ಚಾಮುಂಡೇಶ್ವರಿ ವಿಗ್ರಹವನ್ನು ಅವರಿಗೆ ನೀಡಿದ ಶ್ರೀಗಳು ಆಶೀರ್ವದಿಸಿ ಕೆಲಕಾಲ ಕುಶಲೋಪರಿ ನಡೆಸಿದರು. ಈ ವೇಳೆ ಉಸ್ತುವಾರಿ ಸಚಿವರು, ಶಾಸಕರು, ವಿವಿಧ ನಿಗಮ ಮಂಡಳಿ ಯ ಅಧ್ಯಕ್ಷ ರು ಹಾಜರಿದ್ದರು