ಹೊಸದಿಗಂತ ವರದಿ, ವಿಜಯನಗರ
ನಗರದ ಬಟ್ರಹಳ್ಳಿ ಶ್ರೀ ಆಂಜನೇಯ ಸ್ವಾಮೀ ದೇಗುಲ ಆವರಣದಲ್ಲಿ ಹಮ್ಮಿಕೊಂಡಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಬಿಜೆಪಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಕವಿತಾ ಸಿಂಗ್ ಅವರು ತಿಲಕವಿಟ್ಟು, ಆರತಿ ಬೆಳಗುವ ಮೂಲಕ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಾರಿಗೆ ಸಚಿವ ಬು.ಶ್ರೀರಾಮುಲು, ಬಳ್ಳಾರಿ ನಗರ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ ಅವರು ಸೇರಿದಂತೆ ಇತರರಿದ್ದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ