ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಬಸವನಗುಡಿಯ ಬುಲ್ ಟೆಂಪಲ್ ರಸ್ತೆಯಲ್ಲಿರುವ ದೊಡ್ಡ ಬಸವಣ್ಣ ದೇವಸ್ಥಾನದಲ್ಲಿ ಕಡಲೆಕಾಯಿ ಪರಿಷೆ 2022ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಸಂಜೆ ವಿಶೇಷ ಪೂಜೆ ಸಲ್ಲಿಸಿ, ದೀಪ ಬೆಳಗುವ ಮೂಲಕ ಅಧಿಕೃತವಾಗಿ ಚಾಲನೆ ನೀಡಿದರು.
ಬಳಿಕ ತುಲಾಭಾರ ಮಾಡಿ ಮೊದಲ ಬೆಳೆಯನ್ನು ಬಸವಣ್ಣನಿಗೆ ಅರ್ಪಿಸಿದ ಸಿಎಂ ಬೊಮ್ಮಾಯಿ, ನೆರೆದಿದ್ದವರಿಗೆ ಕಡ್ಲೆಕಾಯಿ ಅಳೆದುಕೊಟ್ಟರು. ಈ ವೇಳೆ ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಉದಯ್ ಗರುಡಾಚಾರ್, ರವಿ ಸುಬ್ರಹ್ಮಣ್ಯ, ಎಂಎಲ್ಸಿ ಶರವಣ ಮತ್ತಿತರರು ಇದ್ದರು.