ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ

ಹೊಸದಿಗಂತ ವರದಿ ವಿಜಯನಗರ:

ಕಂಪ್ಲಿಯ ಸೋಮಪ್ಪ‌ ಕೆರೆ ಅಭಿವೃದ್ಧಿ ಕಾಮಗಾರಿ ಹಾಗೂ ಕಂಪ್ಲಿ-ಗಂಗಾವತಿ ರಾಜ್ಯ ಹೆದ್ದಾರಿ ರಸ್ತೆ ಅಭಿವೃದ್ಧಿ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಚಾಲನೆ ನೀಡಿದರು. ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ವಿವಿಧ ಕಾಮಗಾರಿಗಳಿಗೆ ಈ‌ ಸಂದರ್ಭದಲ್ಲಿ ‌ಸಿಎಂ ಬೊಮ್ಮಾಯಿ ಅವರು ಶಂಕುಸ್ಥಾಪನೆ ನೆರವೇರಿಸಿದರು.

ಕಂಪ್ಲಿಯ ಸೋಮಪ್ಪ ಕೆರೆ ಬಳಿ ಶನಿವಾರ ರಾತ್ರಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ಬಿ.ಶ್ರೀರಾಮುಲು, ಶಾಸಕ ಜೆ.ಎನ್.ಗಣೇಶ, ಮಾಜಿ ಸಂಸದೆ ಜೆ.ಶಾಂತಾ, ಮಾಜಿ ಶಾಸಕ ಸುರೇಶಬಾಬು, ಪುರಸಭೆ ಅಧ್ಯಕ್ಷರು, ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ, ಜಿಪಂ ಸಿಇಒ ಲಿಂಗಮೂರ್ತಿ,ಎಸ್ಪಿ ಸೈದುಲು ಅಡಾವತ್, ಎಡಿಸಿ ಪಿ.ಎಸ್.ಮಂಜುನಾಥ, ಸಹಾಯಕ ಆಯುಕ್ತ ಡಾ.ಆಕಾಶ ಶಂಕರ್, ತಹಸೀಲ್ದಾರ್ ಗೌಸಿಯಾ ಬೇಗಂ, ಜಿಲ್ಲಾನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ‌ ರಮೇಶ್‌ ಉಪಸ್ಥಿತರಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!