ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾರ್ವತ್ರಿಕ ಚುನಾವಣೆ ಬಳಿಕ ಕೈ ಪಾಳಯದಲ್ಲಿ ಸಿಎಂ ಕುರ್ಚಿಗಾಗಿ ಪೈಪೋಟಿ ಶುರುವಾಗಲಿದೆಯೇ? ಡಿಕೆ ಶಿವಕುಮಾರ್ ಅವರ ಆಪ್ತ ಬಣದಿಂದ ಸಿಎಂ ಕುರ್ಚಿ ಮೇಲೆ ಕಟ್ಟೆಚ್ಚರ ವಹಿಸಲಾಗಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.
ಹೌದು. ಪರಿಷತ್ ಸದಸ್ಯ ಪುಟ್ಟಣ್ಣ ಹೇಳಿಕೆ ಸದ್ಯ ವಿವಾದಕ್ಕೀಡಾಗಿದ್ದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಒಕ್ಕಲಿಗ ಕಾರ್ಡ್ ಪ್ರಯೋಗಕ್ಕೆ ಪರಿಷತ್ ಸದಸ್ಯ ಪುಟ್ಟಣ್ಣ ಮುನ್ನುಡಿ ಬರೆದಿದ್ದಾರೆ. ಪುಟ್ಟಣ್ಣ ಅವರ ಹೇಳಿಕೆಗಳ ವಿಶ್ವಾಸಾರ್ಹತೆಯ ಬಗ್ಗೆ ರಾಜಕೀಯ ವಲಯದಲ್ಲಿ ಬಿಸಿ ಬಿಸಿ ಚರ್ಚೆ ಶುರುವಾಗಿದೆ.