ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನಲ್ಲಿ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ರಸ್ತೆಗಳಲ್ಲಿ ಗುಂಡಿ, ವಿದ್ಯುತ್ ಕಂಬಗಳು ಧರೆಗೆ, ತಗ್ಗು ಪ್ರದೇಶದ ಮನೆಗಳಿಗೆ ನೀರು ಸೇರಿದಂತೆ ಇನ್ನಿತರ ಸಮಸ್ಯೆಗಳು ಬಾಧಿಸಿವೆ.
ಈ ಎಲ್ಲಾ ಸಮಸ್ಯೆಗಳ ಮಧ್ಯೆ ಬೆಂಗಳೂರಿನ ಪರಿಸ್ಥಿತಿ, ಬಿಬಿಎಂಪಿ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪರಿಶೀಲಿಸಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಇಂದು ಬೆಳಗ್ಗೆ ಬೆಂಗಳೂರು ನಗರ ಪ್ರದಕ್ಷಿಣೆ ನಡೆಸಿದರು. ಹಲವು ಕಡೆಗಳಲ್ಲಿ ಚರಂಡಿಯ ಸ್ಥಿತಿಗತಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಜಾಸ್ತಿ ಮಳೆಯಾದಷ್ಟೂ ನಮಗೆ ಒಳ್ಳೆಯದು. ಹೆಚ್ಚು ಮಳೆ ಬಂದು ತಮಿಳುನಾಡಿಗೂ ನೀರು ಹರಿಯಲಿ ಎಂದು ಡಿಕೆಶಿ ಹೇಳಿದ್ದಾರೆ. ಮಳೆ ಹಾನಿ ವೀಕ್ಷಣೆ ಮತ್ತು ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲು ಇಂದು ನಾನು ಹಾಗೂ ಸಿಎಂ ಸಿದ್ದರಾಮಯ್ಯ ಸಿಟಿ ರೌಂಡ್ ಮಾಡುತ್ತಿದ್ದೇವೆ. ಕೆಲವು ಜಾಗ ಆಯ್ಕೆ ಮಾಡಿದ್ದೇವೆ. ಎಲ್ಲೆಲ್ಲಿ ರಿಪೋರ್ಟ್ ಬಂದಿದೆ ಅಲ್ಲಿಗೆ ಭೇಟಿ ನೀಡುತ್ತಿದ್ದೇವೆ. ಆಡಳಿತ ಚುರುಕು ಮಾಡಬೇಕು ಎಂದು ಈ ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ.
@XpressBengaluru ಮಳೆ ಹಾನಿ ವೀಕ್ಷಣೆ ಮತ್ತು ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲು ಇಂದು ನಾನು ಹಾಗೂ ಸಿಎಂ ಸಿದ್ದರಾಮಯ್ಯ ಸಿಟಿ ರೌಂಡ್ ಮಾಡುತ್ತಿದ್ದೇವೆ. ಕೆಲವು ಜಾಗ ಆಯ್ಕೆ ಮಾಡಿದ್ದೇವೆ. ಎಲ್ಲೆಲ್ಲಿ ರಿಪೋರ್ಟ್ ಬಂದಿದೆ ಅಲ್ಲಿಗೆ ಭೇಟಿ ನೀಡುತ್ತಿದ್ದೇವೆ. ಆಡಳಿತ ಚುರುಕು ಮಾಡಬೇಕು ಎಂದು ಈ ಕ್ರಮ ಕೈಗೊಂಡಿದ್ದೇವೆ… pic.twitter.com/dVrHHbAy3p
— kannadaprabha (@KannadaPrabha) May 22, 2024