ರಾಜಸ್ಥಾನ ಜನತೆಗೆ ಸಿಎಂ ಗೆಹ್ಲೋಟ್‌ ಕಡೆಯಿಂದ ಐದು ಗ್ಯಾರಂಟಿ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಅವರು ರಾಜ್ಯದ ಜನತೆಗೆ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದಾರೆ.

ನ.25 ರಂದು ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ‘ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಅವಕಾಶ, ‘ಗೋಧನ್ ಸ್ಕೀಮ್’ ಅಡಿಯಲ್ಲಿ ಬೆರಣಿಯ ಬೆಲೆಯನ್ನು ಕೆ.ಜಿಗೆ ₹2 ನಿಗದಿಪಡಿಸಲಾಗುವುದು, ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನ ಅಂಗೀಕಾರ, ಸರ್ಕಾರಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಮೊದಲ ವರ್ಷದಲ್ಲಿ ಟ್ಯಾಬ್ಲೆಟ್ ಅಥವಾ ಲ್ಯಾಪ್‌ಟಾಪ್ ನೀಡಲಾಗುವುದು, ಪ್ರಾಕೃತಿಕ ವಿಕೋಪದಿಂದಾದ ಹಾನಿಗೆ ₹15 ಲಕ್ಷ ವಿಮೆ ಸೌಲಭ್ಯ ನೀಡಲಾಗುವುದು’ ಎಂದು ಭರವಸೆ ನೀಡಿದರು.

1.05 ಕೋಟಿ ಕುಟುಂಬಗಳಿಗೆ ₹500ಕ್ಕೆ ಅಡುಗೆ ಸಿಲಿಂಡರ್‌ ಅನ್ನು ನೀಡಲಾಗುವುದು, ವಾರ್ಷಿಕವಾಗಿ ಕುಟುಂಬದ ಮಹಿಳಾ ಯಜಮಾನಿಗೆ ₹10,000 ಗೌರವಧನವನ್ನು ಕಂತುಗಳಾಗಿ ನೀಡಲಾಗುವುದು. ಇದನ್ನು ಪ್ರಿಯಾಂಕಾ ಗಾಧಿ ವಾದ್ರಾ ಅವರು ಈಗಾಗಲೇ ಜುಂಜುನುದಲ್ಲಿ ನಡೆಸಿದ ಸಾರ್ವಜನಿಕ ರ್‍ಯಾಲಿಯಲ್ಲಿ ಘೋಷಿಸಿದ್ದಾರೆ ಎಂದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!