ಹೊಸದಿಗಂತ ವರದಿ,ಬೆಳಗಾವಿ:
ಕಾಂಗ್ರೆಸ್ ಸಮಾವೇಶದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಕ್ಕೆ ಗರಂ ಆದ ಸಿದ್ದರಾಮಯ್ಯ ಗರಂ ಆಗಿ ವೇದಿಕೆ ಮೇಲೆಯೇ ಪೊಲೀಸ್ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.
ವೇದಿಕೆ ಮುಂಭಾಗದಲ್ಲಿಯೇ ನಡೆದ ಈ ಘಟನೆಯಿಂದ ವಿಚಲಿತರಾದಂತೆ ಕಂಡು ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಯಾರ್ರೀ ಎಸ್ ಪಿ ಎಂದು ಗದರಿದರು. ಆಗ, ಅಲ್ಲಿಯೇ ಇದ್ದ ಧಾರವಾಡ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಭರಮಣಿ ಅರವತ್ತ ಕೈ ಮಾಡಿ ತರಾಟೆಗೆ ತೆಗೆದುಕೊಂಡರು.
ಏನು ಮಾಡತಾ ಇದ್ದೀರಿ ಎಂದು ಪ್ರಶ್ನಿಸಿ ಕೈ ಎತ್ತಿ ಸಿಟ್ಟು ಹೊರಹಾಕಿದರು. ಈ ವೇಳೆ ಸಚಿವ ಎಂಬಿ ಪಾಟೀಲ್ ಮಧ್ಯೆ ಪ್ರವೇಶಿಸಿ ಸಿಎಂ ಅವರನ್ನು ಸಮಾಧಾನ ಮಾಡಿದರು.
ಸಿಎಂ ಮಾತನಾಡುವಾಗ ಬಿಜೆಪಿಯ ನಾಲ್ವರು ಮಹಿಳಾ ಕಾರ್ಯಕರ್ತರು ಕಪ್ಪುಪಟ್ಟಿ ಧರಿಸಿ ಪ್ರತಿಭಟಿಸಿದರು. ಇದ್ದಕ್ಕಿದ್ದಂತೆ ತನ್ನ ಮುಂಭಾಗವೇ ಪ್ರತಿಭಟನೆ ನೋಡಿ ಸಿಎಂ ಒಂದು ಕ್ಷಣ ಭಾಷಣ ಮಾಡುವುದನ್ನು ನಿಲ್ಲಿಸಬೇಕಾಯಿತು.