ಇಂದು ಸಿಎಂ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ: ವೀಕೆಂಡ್ ಕರ್ಫ್ಯೂ ಭವಿಷ್ಯ ನಿರ್ಧಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಮಧ್ಯಾಹ್ನ ಕೋವಿಡ್ ನಿಯಂತ್ರಣ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದೆ. ಇಂದಿನ ಸಭೆಯಲ್ಲಿ ವೀಕೆಂಡ್ ಕರ್ಫ್ಯೂ ಗೊಂದಲ ದೂರ ಆಗಲಿದೆ.

ಕೋವಿಡ್ ತಜ್ಞರು, ಸಚಿವರು ಜತೆ ಸಭೆ ನಡೆಯಲಿದ್ದು, ತಜ್ಞರ ಸಲಹೆ ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ಹೇಳಿದ್ದಾರೆ. ರಾಜ್ಯದಲ್ಲಿರುವ ಕೋವಿಡ್ ಸ್ಥಿತಿ, ತಜ್ಞರು ನೀಡುವ ವರದಿ, ಪಾಸಿಟಿವಿಟಿ ದರ ಇವುಗಳನ್ನೆಲ್ಲ ಗಮನದಲ್ಲಿಟ್ಟುಕೊಂಡು ತೀರ್ಮಾನ ಮಾಡಲಿದ್ದಾರೆ.

ಜನರ ಸಂಕಷ್ಟದ ಬಗ್ಗೆಯೂ ಮಾಹಿತಿ ಇದೆ, ಅದನ್ನೂ ಗಮನದಲ್ಲಿ ಇಟ್ಟುಕೊಂಡು ಮುಂದುವರಿಯಲಿದ್ದೇವೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!