ಇಡಿ ಸಮನ್ಸ್‌ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ ಮೊರೆ ಹೋದ ಸಿಎಂ ಕೇಜ್ರಿವಾಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ (Delhi excise policy case) ತಮಗೆ ನೀಡಲಾದ ಜಾರಿ ನಿರ್ದೇಶನಾಲಯದ (ED) ಎಲ್ಲ ಸಮನ್ಸ್‌ಗಳನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಹೈಕೋರ್ಟ್‌ಗೆ ಮಂಗಳವಾರ ಅರ್ಜಿ ಸಲ್ಲಿಸಿದ್ದಾರೆ.

ಆಮ್ ಆದ್ಮಿ ಪಕ್ಷದ (AAP) ಸಂಚಾಲಕರ ಮನವಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ಬುಧವಾರ ವಿಚಾರಣೆ ನಡೆಸಲಿದೆ.

ಅಬಕಾರಿ ನೀತಿ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಮಾರ್ಚ್ 21 ರಂದು ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್‌ಗೆ ಭಾನುವಾರ ಕೇಂದ್ರ ಸಂಸ್ಥೆ ಒಂಬತ್ತನೇ ಸಮನ್ಸ್ ಜಾರಿ ಮಾಡಿತ್ತು.

ಈ ಪ್ರಕರಣದಲ್ಲಿ ಹಿಂದಿನ ಎಂಟು ಸಮನ್ಸ್‌ಗಳಲ್ಲಿ 6ಕ್ಕೆ ಕೇಜ್ರಿವಾಲ್ ಗೈರಾಗಿದ್ದು, ಇಡಿ ಅವರ ವಿರುದ್ಧ ಸಲ್ಲಿಸಿದ ಎರಡು ದೂರುಗಳ ಮೇಲೆ ದೆಹಲಿ ನ್ಯಾಯಾಲಯವು ದೆಹಲಿ ಸಿಎಂಗೆ ಜಾಮೀನು ನೀಡಿದ ಒಂದು ದಿನದ ನಂತರ ಸಮನ್ಸ್ ಜಾರಿಗೊಳಿಸಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!