ED ಬಂಧನ ಪ್ರಶ್ನಿಸಿ ಸಿಎಂ ಕೇಜ್ರಿವಾಲ್ ಅರ್ಜಿ: ನಾಳೆ ಹೈಕೋರ್ಟ್‌ ನಲ್ಲಿ ವಿಚಾರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಅಬಕಾರಿ ಹಗರಣ ತನಿಖೆ ಚುರುಕುಗೊಂಡಿದ್ದು, ಇತ್ತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನಾಳೆ(ಮಾ.26) ವಿಚಾರಣೆ ನಡೆಸಲಿದೆ.

ಜಸ್ಟೀಸ್ ಸ್ವರ್ಣ ಕಾಂತ ಶರ್ಮ 10.30ಕ್ಕೆ ಅರ್ಜಿಯ ವಿಚಾರಣೆ ನಡೆಸಲಿದ್ದಾರೆ.

ಮಾರ್ಚ್ 21ರಂದು ದೆಹಲಿ ಅಬಕಾರಿ ನೀತಿ ಅಕ್ರಮಗಳ ತನಿಖೆ ನಡೆಸುತ್ತಿರುವ ಇಡಿ ಅದಿಕಾರಿಗಳು ಮುಖ್ಯಮಂತ್ರಿ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ನಡೆಸಿದ್ದರು. ಇಡಿ ಅಧಿಕಾರಿಗಳ 9 ಸಮನ್ಸ್‌ಗೆ ಗೈರಾಗಿದ್ದ ಕೇಜ್ರಿವಾಲ್ ಮನೆ ಮೇಲೆ ರೇಡ್ ಮಾಡಿ ಇಡಿ ಅದಿಕಾರಿಗಳು ಕೇಜ್ರಿವಾಲ್ ಬಂಧಿಸಿದ್ದರು.

ಬಳಿಕ ರೋಸ್ ಅವೆನ್ಯೂ ಕೋರ್ಟ್ ಕೇಜ್ರಿವಾಲ್ ಅವರನ್ನು ಮಾರ್ಚ್ 28ರ ವರೆಗೆ ಇಡಿ ಕಸ್ಟಡಿಗೆ ನೀಡಿದೆ. ಇದರ ಬೆನ್ನಲ್ಲೇ ಆಮ್ ಆದ್ಮಿ ಪಾರ್ಟಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಅರವಿಂದ್ ಕೇಜ್ರಿವಾಲ್ ಬಂಧನ ಕಾನೂನು ಬಾಹಿರವಾಗಿದೆ. ಹೀಗಾಗಿ ತಕ್ಷಣವೇ ಕೇಜ್ರಿವಾಲ್ ಬಿಡುಗಡಗೆ ಕೋರ್ಟ್ ಆದೇಶ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಈ ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಾರ್ಚ್ 27ರಂದು ವಿಚಾರಣೆ ನಡೆಸಲಿದ್ದು, ತೀವ್ರು ಕುತೂಹಲ ಕೆರಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!