ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಸಾಂಬಾದಲ್ಲಿರುವ ಪರಿಹಾರ ಶಿಬಿರಕ್ಕೆ ಭೇಟಿ ನೀಡಿದ್ದು, ಅಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹೆಚ್ಚುತ್ತಿರುವ ಉದ್ವಿಗ್ನತೆಯಿಂದಾಗಿ ಸ್ಥಳಾಂತರಗೊಂಡ ಸ್ಥಳೀಯರೊಂದಿಗೆ ಸಂವಾದ ನಡೆಸಿದ್ದಾರೆ.
ಪಾಕಿಸ್ತಾನವು ಮಾರ್ಟರ್ಗಳು ಮತ್ತು ಭಾರೀ ಫಿರಂಗಿದಳಗಳನ್ನು ಬಳಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ನಂತರ, ಗಡಿ ಗ್ರಾಮವೊಂದರಲ್ಲಿ ಹಲವಾರು ಮನೆಗಳು ಮತ್ತು ವಾಹನಗಳು ಹಾನಿಗೊಳಗಾಗಿವೆ ಎಂದು ವರದಿಯಾಗಿದೆ. ನಿನ್ನೆ ತಡರಾತ್ರಿ ಸಂಭವಿಸಿದ ಶೆಲ್ ದಾಳಿಯಿಂದ ಸ್ಥಳೀಯ ಗುರುದ್ವಾರದ ಗಡಿ ಗೋಡೆಗೂ ಭಾಗಶಃ ಹಾನಿಯಾಗಿದೆ.
ಅಧಿಕಾರಿಗಳು ಪ್ರಸ್ತುತ ಹಾನಿಯ ಸಂಪೂರ್ಣ ಪರಿಸ್ಥಿಯನ್ನು ಮೌಲ್ಯಮಾಪನ ಮಾಡುತ್ತಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.