ಸಿಎಂ ರೇಸ್‌ನಲ್ಲಿದ್ದ ಪರಮೇಶ್ವರ್ ಈಗ ಡಿಸಿಎಂ, ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಪರಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಮುಖ್ಯಮಂತ್ರಿ ರೇಸ್‌ನಲ್ಲಿದ್ದ ತಮಗೆ ಉಪಮುಖ್ಯಮಂತ್ರಿ ಹುದ್ದೆ ನೀಡಿರುವುದಕ್ಕೆ ಯಾವುದೇ ಅಸಮಾಧಾನವಿಲ್ಲ ಮತ್ತು ತಮ್ಮ ಹಿರಿತನವನ್ನು ಕಡೆಗಣಿಸಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಪಕ್ಷದ ಹೈಕಮಾಂಡ್ ತಮಗೆ ಮಹತ್ವದ ಜವಾಬ್ದಾರಿಯನ್ನು ನೀಡಿದ್ದು, ಅದನ್ನು ಶಿಸ್ತಿನ ಸಿಪಾಯಿಯಾಗಿ ಸ್ವೀಕರಿಸುವುದಾಗಿ ತಿಳಿಸಿದ್ದಾರೆ. ಕಡೆಗಣನೆಯ ಪ್ರಶ್ನೆಯೇ ಇಲ್ಲ:“ನನ್ನ ಹಿರಿತನವನ್ನು ಕಡೆಗಣಿಸಲಾಗಿದೆ ಅಥವಾ ನನಗೆ ಅನ್ಯಾಯವಾಗಿದೆ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ” ಎಂದು ಹೇಳುವ ಮೂಲಕ ತಮಗೆ ಹಿನ್ನಡೆಯಾಗಿದೆ ಎಂಬ ವಾದಗಳನ್ನು ಅವರು ಸಂಪೂರ್ಣವಾಗಿ ತಳ್ಳಿಹಾಕಿದರು. … Continue reading ಸಿಎಂ ರೇಸ್‌ನಲ್ಲಿದ್ದ ಪರಮೇಶ್ವರ್ ಈಗ ಡಿಸಿಎಂ, ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಪರಂ