ಜಾತಿ ಗಣತಿ ವರದಿ ಸ್ವೀಕರಿಸಿದ ಸಿಎಂ: ಕಾಂಗ್ರೆಸ್ ಮುಖಂಡ ಡಾ.ಶಾಮನೂರು ಶಿವಶಂಕರಪ್ಪ ವಿರೋಧ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಖ್ಯಮಂತ್ರಿ ಸಿದ್ಧರಾಮಯ್ಯ ಜಾತಿ ಗಣತಿ ವರದಿ ಸ್ವೀಕರಿಸುತ್ತಿದ್ದಂತೆ ಕಾಂಗ್ರೆಸ್ ಪಕ್ಷದಲ್ಲೇ ವಿರೋಧ ವ್ಯಕ್ತವಾಗಿದೆ. ಹಿರಿಯ ಕಾಂಗ್ರೆಸ್ ನಾಯಕರಾದ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ಜಾತಿಗಣತಿ ವಿರುದ್ಧ ಮತ್ತೆ ಗುಡುಗಿದ್ದಾರೆ.

ಜಾತಿ ಗಣತಿ ವರದಿ ಅವೈಜ್ನಾನಿಕವಾಗಿದೆ ಎಂಬ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಜಾತಿ ಗಣತಿ ವಿರೋಧಿಸಿ ವೀರಶೈವ ಮಹಾಸಭಾದಿಂದ ಈಗಾಗಲೇ ಎರಡು ಬಾರಿ ಮನವಿ ಸಲ್ಲಿಸಲಾಗಿದೆ. ಇನ್ನು ಇತ್ತೀಚೆಗೆ ದಾವಣಗೆರೆಯಲ್ಲಿ ನಡೆದ ವೀರಶೈವ ಮಹಾಸಭಾ ಸಮ್ಮೇಳನದಲ್ಲಿ ಕೂಡ ಜಾತ ಗಣತಿ ವಿರೋಧಿಸಿ ನಿರ್ಣಯ ಅಂಗೀಕರಿಸಲಾಗಿದೆ ಎಂದರು.

ಮನೆ, ಮನೆಗೆ ಭೇಟಿ ನೀಡದೆ ಅವೈಜ್ಙಾನಿಕುವಾಗಿ ತಯಾರಿಸಲಾದ ವರದಿಯನ್ನು ಸಮಾಜ ಒಪ್ಪುವುದಿಲ್ಲ. ಈ ನಿಟ್ಟಿನಲ್ಲಿ ಹೋರಾಟ ಚಾಲ್ತಿ‌ಯಲ್ಲಿರಲಿದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!