ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಗಾಂಧಿ ಭವನದ ಬಳಿ ಇರುವ ಖಾದಿ ಎಂಪೋರಿಯಂನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಶಾಪಿಂಗ್ ಮಾಡಿದ್ದಾರೆ. ಸಿಎಂ ಇಲ್ಲಿ ಡಜನ್ ಕರವಸ್ತ್ರ ಹಾಗೂ ಎರಡು ಪ್ಯಾಂಟ್, ಆರು ಶರ್ಟ್, ನಾಲ್ಕು ಬನಿಯನ್, ಎರಡು ಜುಬ್ಬಾಗಳನ್ನು ಖರೀದಿಸಿದರು.
ಮುಖ್ಯಮಂತ್ರಿ ಬೊಮ್ಮಾಯಿ ಅವರ ಗೆ ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜು , ಸಚಿವ ಗೋವಿಂದ ಕಾರಜೋಳ ಸಾಥ್ ನೀಡಿದರು.
ಸಂಕಷ್ಟದಲ್ಲಿರುವ ಖಾದಿ ಮತ್ತು ಗ್ರಾಮೋದ್ಯೋಗ ಸಂಘ-ಸಂಸ್ಥೆಗಳಿಗೆ ಆರ್ಥಿಕ ಬಲ ನೀಡುವ ದೃಷ್ಟಿಯಿಂದ ಸಿಎಂ ಭೇಟಿ ನೀಡಿದ್ದಾರೆ. ತಮ್ಮ ವ್ಯಾಪ್ತಿಯಲ್ಲಿ ಬರುವ ಖಾದಿ ಭಂಡಾರಗಳಿಗೆ ಭೇಟಿ ನೀಡಿ, ಖಾದಿ ಮತ್ತು ಗ್ರಾಮೋದ್ಯೋಗ ಉತ್ಪನ್ನಗಳನ್ನು ಖರೀದಿಸುವಂತೆ ಮುಖ್ಯಮಂತ್ರಿ ಸೇರಿದಂತೆ ಎಲ್ಲಾ ಶಾಸಕರುಗಳಿಗೆ ಎಂಟಿಬಿ ನಾಗರಾಜು ಪತ್ರ ಬರೆದಿದ್ದರು.
ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜು ಅವರು ಸ್ವತಃ ತಾವೇ ಅದಕ್ಕೆ ಮೇಲ್ಪಂಕ್ತಿ ಹಾಕಲು ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಇತರ ಸಚಿವರುಗಳನ್ನು ಕರೆದೊಯ್ದು, ಖಾದಿ ಉತ್ಪನ್ನಗಳನ್ನು ಖರೀದಿಸಿದರು.
ಈ ಮಳಿಗೆಯನ್ನು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರ ತಂದೆ ಎಸ್. ಆರ್. ಬೊಮ್ಮಾಯಿ, ಅವರು (ಅಂದಿನ ಹಣಕಾಸು ಸಚಿವರು) 15.11.1984ರಲ್ಲಿ ಉದ್ಘಾಟಿಸಿದ್ದರು.