ಹಿಜಾಬ್ ವಿಷಯದಲ್ಲಿ ಸಿಎಂ ಸಿದ್ದರಾಮಯ್ಯ ಎಡವಿದ್ದಾರೆ: ಪೇಜಾವರಶ್ರೀ

ಹೊಸ ದಿಗಂತ ವರದಿ, ಮದ್ದೂರು :

ಹಿಜಾಬ್ ನಿಷೇಧ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಡವಿದ್ದಾರೆ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಗಳು ಭಾನುವಾರ ಹೇಳಿದರು.

ಪಟ್ಟಣದಲ್ಲಿ ಸುದ್ದಿಗಾರರಿಗೆ ಮಾತನಾಡಿದ ಶ್ರೀಗಳು, ಆಳುವ ಸರ್ಕಾರಗಳು ಕಾನೂನು ಮಾಡುವಾಗ ಅದು ಎಲ್ಲರಿಗೂ ಅನ್ವಯವಾಗುವಂತೆ ಇರಬೇಕು. ಕೇವಲ ಒಂದು ಸಮಾಜವನ್ನು ಗುರಿಯಾಗಿಟ್ಟುಕೊಂಡು ಕಾನೂನು ರೂಪಿಸುವುದು ಸರಿಯಲ್ಲ ಎಂದು ಕಿಡಿಕಾರಿದರು.

ಹಿಜಾಬ್ ನಿಷೇಧ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಧಾರ ಸಮಾಜದಲ್ಲಿ ಶೋಭೆ ತರುವುದಿಲ್ಲ. ಇದರಿಂದ ಸಮಾಜದಲ್ಲಿ ಪರಸ್ಪರ ಸಂಘರ್ಷಕ್ಕೆ ಕಾರಣವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಅಯೋಧ್ಯೆಯ ರಾಮಮಂದಿರ ನಿರ್ಮಾಣದ ನಂತರ ನಮ್ಮ ಕಾರ್ಯ ಚಟುವಟಿಕೆ ಇಷ್ಟಕ್ಕೆ ಮುಗಿಯಬಾರದು. ದೇಶದಲ್ಲಿ ಆರ್ಥಿಕವಾಗಿ ಹಿಂದುಳಿದ ಪ್ರತಿಯೊಬ್ಬರಿಗೂ ಸೂರು ಕಲ್ಪಿಸುವುದು ನಮ್ಮ ಗುರಿಯಾಗಬೇಕು ಎನ್ನುವುದು ನಮ್ಮ ಅಪೇಕ್ಷೆಯಾಗಿದೆ. ಇದಕ್ಕೆ ಆರ್ಥಿಕವಾಗಿ ಸದೃಢರಾದವರು ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!