ಹೊಸದಿಗಂತ ವರದಿ ಧಾರವಾಡ:
ಸುಸ್ಥಿರ ಕೃಷಿಗೆ ಸಿರಿಧಾನ್ಯಗಳು ಘೋಷವಾಕ್ಯದಡಿ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಶನಿವಾರ ಆರಂಭಗೊಂಡ ನಾಲ್ಕು ದಿನಗಳ ಕೃಷಿ ಮೇಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ, ಕಾರ್ಮಿಕ ಸಚಿವ ಸಂತೋಷ ಲಾಡ್, ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ಕೃಷಿ ವಿವಿ ಕುಲಪತಿ ಡಾ.ಪಿ.ಎಲ್. ಪಾಟೀಲ ಅನೇಕರು ಇದ್ದರು.