ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ‘ಕಿಮೋಥೆರಪಿ’ ಘಟಕ ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ನೀಡಲು ಡೇ ಕೇರ್ ಕಿಮೋಥರಪಿ ಘಟಕಗಳನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು.

ಇಂದು ಮೈಸೂರು ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಈ ಒಂದು ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಡೇ ಕೇರ್ ಕಿಮೋಥರಪಿ ಘಟಕಗಳ ಲೋಕಾರ್ಪಣೆಗೊಳಿಸಲಾಯಿತು. ಈ ಒಂದು ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಹಲವರು ಈ ಒಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಕರ್ನಾಟಕದ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಆರಂಭವಾಗಲಿವೆ. ಇನ್ಮುಂದೆ ಜಿಲ್ಲಾ ಆಸ್ಪತ್ರೆಗಳಲ್ಲೂ ಕ್ಯಾನ್ಸರ್​​ಗೆ ಚಿಕಿತ್ಸೆ ಪಡೆಯಬಹುದು. ಪ್ರತಿ ವರ್ಷ ಹೊಸದಾಗಿ 70 ಸಾವಿರ ಕ್ಯಾನ್ಸರ್ ಪ್ರಕರಣ ದಾಖಲಾಗುತ್ತಿದೆ. ಬಡವರು ಕಡಿಮೆ ವೆಚ್ಚದಲ್ಲಿ ಕ್ಯಾನ್ಸರ್​ಗೆ ಚಿಕಿತ್ಸೆ ಪಡೆಯಬೇಕು ಅಂದರೆ ಬೆಂಗಳೂರಿನ ಕಿದ್ವಾಯಿ ಅಂತಹ ಸಂಸ್ಥೆಗಳಿಗೆ ಬರಬೇಕು. ಇದೂ ಕೂಡ ಕಷ್ಟದ ಕೆಲಸ. ಹಾಗಾಗಿ ಬಡವರಿಗೆ ಅನುಕೂಲ ಆಗಲಿ ಎಂದು 16 ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ ಕೇರ್ ಓಪನ್ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!